News Kannada
Tuesday, March 28 2023

ಮಂಗಳೂರು

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ

Health awareness programme at Sri Mahaveera College
Photo Credit : News Kannada

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿನಿ ಸಂಘ, ಎನ್‌ಸಿಸಿ, ಎನ್ ಎಸ್ ಎಸ್, ರೆಡ್‌ಕ್ರಾಸ್ ಹಾಗೂ ರೇಂಜರ್ಸ್ ಘಟಕಗಳ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮೂಡುಬಿದಿರೆಯ ಸಮುದಾಯ ಆರೋಗ್ಯ ಕೇಂದ್ರದ ಇಂಟಗ್ರೇಟೆಡ್ ಕೌನ್ಸೆಲಿಂಗ್ ಮತ್ತು ಪರೀಕ್ಷಾ ಕೇಂದ್ರದ ಸಲಹೆಗಾರರಾದ ದಿವ್ಯಾ ಎಂ.ಪಿ., ಎಚ್‌ಐವಿಯ ಗುಣಲಕ್ಷಣಗಳು, ಹರಡುವ ವಿಧಾನಗಳು, ಈ ಕಾಯಿಲೆಯಿಂದಾಗುವ ಪರಿಣಾಮಗಳು ಮತ್ತು ಮುಂದಿನ ಜೀವನ ಸುರಕ್ಷಿತವಾಗಿರಲು ತೆಗೆದುಕೊಳ್ಳಬೇಕಾದ ಜಾಗ್ರತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಮೂಡುಬಿದಿರೆ ಸಮುದಾಯ ಆರೋಗ್ಯಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ ಕೆ. ಹದಿಹರೆಯದ ಹೆಣ್ಣುಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಾಸಿಕ ಋತುಚಕ್ರ ನಿರ್ವಹಣೆ, ನೈರ್ಮಲ್ಯ ಹಾಗೂ ಶುಚಿತ್ವದ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್, ಐಕ್ಯೂಎಸಿ ಮತ್ತು ವಿದ್ಯಾರ್ಥಿನಿ ಸಂಘದ ಸಂಚಾಲಕಿ ನಳಿನಿ, ಎನ್‌ಸಿಸಿ ಅಧಿಕಾರಿ ವಿಜಯಲಕ್ಷಿ, ಪದವಿಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ಶಾರದಾ, ರೇಂಜರ್ಸ್ ಅಧಿಕಾರಿ ರಶ್ಮಿತಾ, ಪದವಿಪೂರ್ವ ಎನ್ ಎಸ್ ಎಸ್ ಅಧಿಕಾರಿ ಪೂರ್ಣಿಮಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಿಂಚನಾ ಸ್ವಾಗತಿಸಿ, ಹೆನ್ವಿಲ್ ಕಾರ್ಯಕ್ರಮ ನಿರೂಪಿಸಿದರು.

See also  ರಾಮನಗರ: ಕೈಗಾರಿಕೋದ್ಯಮಿ ಆತ್ಮಹತ್ಯೆ ಪ್ರಕರಣ, ಬಿಜೆಪಿ ಶಾಸಕ ಸಹಿತ ಐವರ ವಿರುದ್ಧ ಪ್ರಕರಣ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು