News Kannada
Friday, March 31 2023

ಮಂಗಳೂರು

ಬಂಟ್ವಾಳ: ಕಾಂಕ್ರೀಟಿಕರಣ ಮಾಡಲು ಅಗೆದು ಹಾಕಿದ ರಸ್ತೆ, ಸಾರ್ವಜನಿಕರ ಆಕ್ರೋಶ

Road dug up for concretisation, public outrage
Photo Credit : By Author

ಬಂಟ್ವಾಳ: ತಾಲೂಕಿನ ಮಾವಿನಕಟ್ಟೆ- ಕೊರಗಟ್ಟೆ-ಪಾಂಗಲ್ಪಾಡಿ ಜಿಲ್ಲಾ ಮುಖ್ಯ ರಸ್ತೆಯ ಮುರದಮೇಲು ಎಂಬಲ್ಲಿಂದ ಗೋಂಜದವರಗೆ ಕಾಂಕ್ರೀಟಿಕರಣ ಮಾಡುವುದೆಂದು ಅಗೆದು ಹಾಕಿ ಹಲವು ದಿನಗಳೇ ಕಳೆದರೂ ಇನ್ನೂ ಕಾಯಕಲ್ಪ ಒದಗಿಸದೆ ಇರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಬಸ್ಸುಗಳು, ಶಾಲಾ ಬಸ್ಸುಗಳು ಸಹಿತ ಸಾರ್ವಜನಿಕ ವಾಹನಗಳು ನಿರಂತರವಾಗಿ ಸಂಚರಿಸುವ ಈ ರಸ್ತೆಯಲ್ಲಿ ಇದೀಗ ಅಗೆದು ಹಾಕಿದ ಪರಿಣಾಮ ರಸ್ತೆ ಸಂಚಾರವೇ ಅಸಾಧ್ಯವಾದಂತಿದೆ. ಶಾಲಾ ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು ಇದೀಗ ರಸ್ತೆ ಅವ್ಯವಸ್ಥೆಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದು, ತಕ್ಷಣ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಇಲ್ಲಿನ ರಸ್ತೆ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಸ್ಥಳೀಯ ತುಳುನಾಡ ರಕ್ಷಣಾ ವೇದಿಕೆಯ ಪ್ರಮುಖರು ಜಿಲ್ಲಾಧಿಕಾರಿಯವರಿಗೆ ಲಿಖಿತ ದೂರು ನೀಡಿ ಆಗ್ರಹಿಸಿದ್ದಾರೆ. ತಪ್ಪಿದಲ್ಲಿ ಸಾರ್ವಜನಿಕರ ಸಹಕಾರದಿಂದ ಗುತ್ತಿಗೆದಾರ ಹಾಗೂ ಇಂಜಿನಿಯರ್ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

See also  ಉಜಿರೆ: ಮೋಕ್ಷ ಕೊಡುವವನು ಜನಾರ್ದನ ದೇವರು ಮಾತ್ರ- ಶೀರೂರು ಶ್ರೀ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು