News Kannada
Sunday, March 26 2023

ಮಂಗಳೂರು

ಉಜಿರೆ: ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ- ಜಿ.ಎಸ್. ನಟೇಶ್

Personality building is possible with good values: G.S. Natesh
Photo Credit : By Author

ಉಜಿರೆ: ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜದ ಸುಭದ್ರತೆ ಸಾಧ್ಯವಾಗುತ್ತದೆ ಎಂದು ಪ್ರವಚನಕಾರ ಜಿ.ಎಸ್. ನಟೇಶ್ ಹೇಳಿದರು.

ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ‘ಮಂಕುತಿಮ್ಮನ ಕಗ್ಗ-ಜೀವನ ಮೌಲ್ಯ’ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ಉತ್ತಮ ವ್ಯಕ್ತಿತ್ವ ನಿರ್ಮಾಣವಾಗಬೇಕಾದರೆ ಉತ್ತಮ ಮೌಲ್ಯಗಳು ವ್ಯಕ್ತಿಯಲ್ಲಿ ಬೆಳೆಯಬೇಕು. ಹೀಗಾದಾಗ ಮಾತ್ರ ಸಮಾಜದಲ್ಲಿ ಸುಭದ್ರತೆ ಸಾಧ್ಯವಾಗುತ್ತದೆ. ಉತ್ತಮ ಮೌಲ್ಯಗಳು ಕಣ್ಣಿಗೆ ಕಾಣದಿದ್ದರೂ ಜೀವನದ ಅಸ್ತಿತ್ವಕ್ಕೆ ಈ ಅಂಶಗಳೇ ಮಹತ್ವಪೂರ್ಣವಾಗುತ್ತದೆ ಎಂದರು.

“ಒಬ್ಬ ವ್ಯಕ್ತಿಯ ಬಾಹ್ಯ ಸೌಂದರ್ಯ ಎಂದಿಗೂ ಶಾಶ್ವತವಲ್ಲ. ಆ ವ್ಯಕ್ತಿಯ ಆತ್ಮ ಮತ್ತು ಅಂತರಂಗ ಶುದ್ಧಿಯಾದಾಗ ಮಾತ್ರ ಆತ ನಿಜವಾದ ಮನುಷ್ಯನಾಗುತ್ತಾನೆ. ವ್ಯಕ್ತಿಯ ನಡೆ-ನುಡಿಯಲ್ಲಿ ವಿನಯವಿರಬೇಕು. ಈ ವಿನಯತೆ ವ್ಯಕ್ತಿಯನ್ನು ಜೀವನದಲ್ಲಿ ಉತ್ತುಂಗಕ್ಕೆ ಕರೆದೊಯ್ಯುತ್ತದೆ” ಎಂದರು.

ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳುವಲ್ಲಿ ಮಾತಿನ ಸಂಸ್ಕಾರ ಬಹಳ ಮುಖ್ಯವಾಗುತ್ತದೆ. ಒಬ್ಬ ವ್ಯಕ್ತಿ ಆಡುವ ಮಾತು ಆತನ ವ್ಯಕ್ತಿತ್ವದ ಚಿತ್ರಣವನ್ನು ನೀಡುತ್ತದೆ. ಹೀಗಾಗಿ ಮಾತಿನ ಮೇಲಿನ ಹಿಡಿತ ಬಹಳ ಮುಖ್ಯವಾಗುತ್ತದೆ. ಇದರ ಜೊತೆಗೆ ಮುಗ್ಧತೆಯ ಸಾಕಾರ ಪ್ರತಿಯೊಬ್ಬ ವ್ಯಕ್ತಿಯಲ್ಲಿ ಆದಾಗ ಜೀವನದ ಮೌಲ್ಯ ತಾನಾಗಿಯೇ ವೃದ್ಧಿಯಾಗುತ್ತದೆ ಎಂದು ಅವರು ತಿಳಿಸಿದರು.

ಉಪನ್ಯಾಸದ ಮಧ್ಯದಲ್ಲಿ ಮಂಕುತಿಮ್ಮನ ಕಗ್ಗವನ್ನು ಹೇಳಿ ಅದರ ಸಾರವನ್ನು ಹೇಳುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಇದಲ್ಲದೇ ತಂದೆ ತಾಯಿಯ ಮಹತ್ವ, ಜೀವನದ ಮೌಲ್ಯ, ಮುಗ್ಧತೆಯ ಮಹತ್ವ ಮತ್ತು ಸಹಾಯ ಸಹಕಾರದ ಮನೋಭಾವ ಇನ್ನಿತರ ಮೌಲ್ಯಾಧಾರಿತ ವಿಚಾರಗಳನ್ನು ಕಗ್ಗದ ಮೂಲಕ ವಿವರಿಸಿದರು.

ಕಾರ್ಯಕ್ರಮವನ್ನು ಸಮ್ಮೇಳನದ ಸ್ಮರಣ ಸಂಚಿಕೆ ಸಮಿತಿಯ ಸಂಚಾಲಕ ಪ್ರೊ. ಗಣಪತಿ ಭಟ್ ಕುಳಮರ್ವ ನಿರೂಪಿಸಿದರು.

ವರದಿ: ಪ್ರಸೀದ್ ಭಟ್,
ಚಿತ್ರ: ಶಶಿಧರ ನಾಯ್ಕ,

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ

 

See also  ಕಾರವಾರ: ಶಿವನ ಗರ್ಭಗುಡಿಯಲ್ಲಿ ರಾರಾಜಿಸಿದ ತ್ರಿವರ್ಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು