News Kannada
Saturday, April 01 2023

ಸಮುದಾಯ

ಅಳದಂಗಡಿ: ಮಹಾಗಣಪತಿ ದೇಗುಲದ ಅಷ್ಠಬಂಧ ಬ್ರಹ್ಮಕಲಶೋತ್ಸವ

Aladangadi: Ashtabandha Brahmakalashotsava of Mahaganapathi Temple
Photo Credit : By Author

ಬೆಳ್ತಂಗಡಿ: ದೇವರು ನೀಡಿದ ಶರೀರವನ್ನು ಸರಿಯಾದ ರೀತಿಯಲ್ಲಿ ಸದ್ವಳಕೆ ಮಾಡಬೇಕು. ಆಗ ಬದುಕಿನಲ್ಲಿ ಸಾರ್ಥಕತೆ ಬರುತ್ತದೆ. ದೇಗುಲದ ಜೀಣೋದ್ಧಾರ ಆತ್ಮೋದ್ಧಾರದ ಪೂರಕ. ಇದರಿಂದ ಊರಿನಲ್ಲಿ ಪುಣ್ಯ ಸಂಚಯವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ರವಿವಾರ ಜರಗಿದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿ, ಸಮಾಜದಲ್ಲಿ ಸಂಸ್ಕಾರ ತುಂಬಿಸುವ ಕೆಲಸ ಇಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳಿಂದ ಆಗುತ್ತದೆ ಎಂದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಅಜಿಲರು ವಹಿಸಿದ್ದರು. ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ಶಿರ್ಲಾಲು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಸಾಮಾನಿ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ ಶಂಕರ ರಾವ್, ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಪ್ರ. ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಎ. ಮೋಹನದಾಸ್ ಸ್ವಾಗತಿಸಿ, ಉಪಾಧ್ಯಕ್ಷ ರಾಜೀತ್ ರೈ ವಂದಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯ ನಿತ್ಯಾನಂದ ಶೆಟ್ಟಿ ನೊಚ್ಚ ವಂದಿಸಿದರು.

ಸಮ್ಮಾನ
ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮರದ ದಾನಿ ರವಿ ಕೋಟ್ಯಾನ್ ಹಾಗೂ ವಿಶೇಷ ಕೊಡುಗೆ ನೀಡಿದ ದೇವದಾಸ್ ಅವರನ್ನು ಸಮ್ಮಾನಿಸಲಾಯಿತು. ಪ್ರತಿಭೆ ಕು| ಮನಿಷಾ ಅಳದಂಗಡಿ ಅವರು ಕೈಚಳಕದ ಮೂಲಕ ನೂಲಿನಿಂದ ಬಿಡಿಸಿದ ಗಣಪತಿ ಭಾವಚಿತ್ರವನ್ನು ಸ್ವಾಮೀಜಿಯವರು ಅನಾವರಣಗೊಳಿಸಿದರು.

See also  ಶ್ರೀಲಂಕಾ: ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ರಾನಿಲ್‌ ವಿಕ್ರಮಸಿಂಘೇ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು