News Kannada
Saturday, April 01 2023

ಮಂಗಳೂರು

ಮೂಡುಬಿದಿರೆ ತಾಲೂಕಿನ ಬಂಡೆಕಲ್ಲಿನಲ್ಲಿ ತುಳು ಶಾಸನ ಪತ್ತೆ

Tulu inscription found at Rocky in Moodbidri taluk
Photo Credit : News Kannada

ಮೂಡುಬಿದಿರೆ: ತಾಲೂಕಿನ ದರೆಗುಡ್ಡೆಯ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಲ ಬದಿಯಲ್ಲಿರುವ, ಸ್ಥಳೀಯರು ಆನೆಕಲ್ಲು ಎಂದು ಕರೆಯುವ ಬಂಡೆಯಲ್ಲಿ ತುಳು ಶಾಸನವೊಂದನ್ನು ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್.ಎ. ಕೃಷ್ಣಯ್ಯ ಅವರು ಪತ್ತೆ ಮಾಡಿರುತ್ತಾರೆ.

ಈ ಸ್ಥಳದ ಅಧ್ಯಯನ ನಡೆಸಲು ಉಡುಪಿಯ ವೇದಮೂರ್ತಿ ಸಗ್ರಿ ಗೋಪಾಲಕೃಷ್ಣ ಸಾಮಗ ಅವರು ಮಾರ್ಗದರ್ಶನ ನೀಡಿರುವರು ಎಂದು ಕೃಷ್ಣಯ್ಯ ಅವರು ತಿಳಿಸಿರುತ್ತಾರೆ. ದೇವಾಲಯದ ಜೀರ್ಣೋದ್ಧಾರದ ಹಿನ್ನಲೆಯಲ್ಲಿ ಈ ಬಂಡೆಯ ಸುತ್ತಲೂ ಮಣ್ಣು ಜಮಾವಣೆಯಾಗಿದ್ದು, ಪ್ರಸ್ತುತ ಈ ಶಾಸನದಲ್ಲಿ 5 ರಿಂದ 6 ಸಾಲಿನ ಅಸ್ಪಷ್ಟ ತುಳು ಲಿಪಿಯು ಗೋಚರವಾಗಿದ್ದು ಉಳಿದ ಸಾಲುಗಳು ಮಣ್ಣಿನಲ್ಲಿ ಹೂತುಹೋಗಿದೆ.

ಈ ಶಾಸನದ ಹೆಚ್ಚುವರಿ ಅಧ್ಯಯನವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಕೃಷ್ಣಯ್ಯ ಅವರು ತಿಳಿಸಿದ್ದಾರೆ. ಶಾಸನದ ಪ್ರಾಥಮಿಕ ಅಧ್ಯಯನವನ್ನು ಮಾಡಿರುವ ತುಳುಲಿಪಿ ಶಾಸ್ತ್ರಜ್ಞರಾದ ಡಾ. ರಾಧಾಕೃಷ್ಣ ಬೆಳ್ಳೂರು ಅವರು ಲಿಪಿಯ ಆಧಾರದ ಮೇಲೆ ಈ ಶಾಸನವು 12-13ನೇ ಶತಮಾನಕ್ಕೆ ಸೇರಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕ್ಷೇತ್ರಕಾರ್ಯ ಶೋಧನೆಗೆ ರವಿ ಸಂತೋಷ್ ಆಳ್ವ ಮತ್ತು ಸ್ಥಳೀಯರು ಸಹಕಾರ ನೀಡಿರುತ್ತಾರೆ.

See also  ಧರ್ಮಸ್ಥಳದ ಮಂಜೂಷ ವಸ್ತು ಸಂಗ್ರಹಾಲಯಕ್ಕೆ ಮರದ ರಥ ಹಸ್ತಾಂತರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು