News Kannada
Sunday, March 26 2023

ಮಂಗಳೂರು

ಕಲ್ಲಡ್ಕ: ವೃತ್ತಿಸಂಬಂಧಿ ಕೋರ್ಸ್‌ಗಳಿಗೆ ಸ್ಕಿಲ್‌ ಇಂಡಿಯಾ ಯೋಜನೆ ಪ್ರೇರಣೆ: ಗೋವಾ ಸಿಎಂ ಸಾವಂತ್

Skill India will inspire the new generation to pursue career courses: Pramod Sawant
Photo Credit : News Kannada

ಕಲ್ಲಡ್ಕ:  ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಯೋಜನೆಯಾದ ಸ್ಕಿಲ್ ಇಂಡಿಯಾ ಮೂಲಕ ನವಪೀಳಿಗೆಗೆ ವೃತ್ತಿಸಂಬಂಧ ಕೋರ್ಸ್ ಗಳನ್ನು ಮಾಡಲು ಪ್ರೇರೇಪಣೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಸಲಹೆ ನೀಡಿದರು.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಅವರು ಕೇಂದ್ರದ ಸ್ಥಾಪಕ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ಚಿಂತನೆಗಳ ಮೂಲಕ ಸಂಸ್ಕಾರಯುತವಾದ ಶಿಕ್ಷಣ ವ್ಯವಸ್ಥೆಯನ್ನು ನೀಡಲಾಗುತ್ತಿದೆ ಎಂದು ಶ್ಲಾಘಿಸಿದರು.

ಶೈಕ್ಷಣಿಕವಾಗಿಯಷ್ಟೇ ಅಲ್ಲ, ಸಂಸ್ಕಾರಯುತವಾಗಿ ಬೆಳೆಯಲು ಹಾಗೂ ರಾಷ್ಟ್ರೀಯ ವಿಚಾರಧಾರೆಯುಳ್ಳ ನಾಗರಿಕರಾಗಿ ರೂಪುಗೊಳ್ಳಲು ನವಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಕಾರ್ಯ  ಆಗಬೇಕಾಗಿದೆ ಎಂದರು.
ಇದಕ್ಕೂ ಮೊದಲು ವಿದ್ಯಾಕೇಂದ್ರದ ವಿವಿಧ ಚಟುವಟಿಕೆಗಳನ್ನು ಗಮನಿಸಿದ ಡಾ. ಸಾವಂತ್, ಬಳಿಕ ಪಿಯು ವಿದ್ಯಾರ್ಥಿಗಳ ದೀಪಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಗಳೂರು ದಕ್ಷಿಣ ಶಾಸಕ ಬಿ. ವೇದವ್ಯಾಸ ಕಾಮತ್, ಪ್ರಸಾದ್ ನೇತ್ರಾಲಯದ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಕೂಡ್ಲು, ಹಂಪಿ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎಸ್.ಸಿ.ರಮೇಶ್, ಉದ್ಯಮಿಗಳಾದ ಬಾಲಕೃಷ್ಣ ಭಂಡಾರಿ, ನವೀನ್ ಹೆಗ್ಡೆ ಮುಂಬೈ, ಶ್ರೀರಾಮ ವಿದ್ಯಾಕೇಂದ್ರದ ಅದ್ಯಕ್ಷ ನಾರಾಯಣ ಸೋಮಯಾಜಿ ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಿಯಾಂಕಾ ಸ್ವಾಗತಿಸಿದರು. ವೆಂಕಟೇಶ್ ವಂದಿಸಿದರು. ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

See also  ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದ ವ್ಯಕ್ತಿ ಇಂದು ಮಂಗಳೂರಿಗೆ ಆಗಮನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು