News Kannada
Wednesday, March 22 2023

ಮಂಗಳೂರು

ಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯಾಗಿ ಆದಿತ್ಯ ನಾರಾಯಣ್‌ ಸ್ಪರ್ಧೆ

Belthangady Assembly Elections 2019: Aditya Narayan to contest as Sarvodaya Karnataka Party candidate
Photo Credit : By Author

ಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ರೈತ ಸಂಘದ ಯುವ ನಾಯಕ ಆದಿತ್ಯ ನಾರಾಯಣ ಕೊಲ್ಲಾಜೆಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪುಣಚ ಹೇಳಿದರು. ಅವರು ಫೆ.10 ರಂದು ಅಂಬೇಡ್ಕರ್ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಜನಸಾಮಾನ್ಯರಿಗೆ ಸಹಾಯ ಮಾಡುವ ದೃಷ್ಟಿಯೊಂದಿಗೆ ರಾಜಕೀಯಕ್ಕೆ ಪುವೇಶಿಸಿ ಪಕ್ಷವನ್ನು ಶ್ರೀಸಾಮಾನ್ಯನ ಅಭಿವೃದ್ಧಿಗಾಗಿ ಕಟ್ಟಲಾಗಿದೆ.
ಈಗಾಗಲೇ 3 ಶಾಸಕರ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷವು ರೈತ ಸಂಘ ಮತ್ತು ಡಿಎಸ್‌ಎಸ್‌ಗಳ ಬಲವಾದ ಬೆಂಬಲದೊಂದಿಗೆ ಮತ್ತೆ ರಾಜಕೀಯಕ್ಕೆ ಪುವೇಶಿಸುತ್ತಿದೆ. ಸರ್ವೋದಯ ಕರ್ನಾಟಕ ಪಕ್ಷ ಈಗಾಗಲೇ ಬೆಳ್ತಂಗಡಿ, ಮೇಲುಕೋಟೆ, ಮಂಡ್ಯ ವಿರಾಜಪೇಟೆ, ಬೀಳಗಿ ಸೇರಿದಂತೆ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ಮಾತನಾಡಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಆಗಿರುವ ವಿವಿಧ ಸಂಕಷ್ಟದ ಕುರಿತು ಸರಕಾರದ ವಿರುದ್ಧ ಫೆ.16 ರಂದು ಬೆಂಗಳೂರು ಪ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ರೈತರ ಹಾಕ್ಕೋತ್ತಾಯ ಗಳಿಗಾಗಿ ಬ್ರಹತ್ ಪ್ರತಿಭಟನೆ ನಡೆಯಲಿದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಮಾತನಾಡಿ ಫೆ.13 ರಂದು ಮಂಡ್ಯ ದಲ್ಲಿ ವಿಶ್ವ ರೈತ ಚೇತನ ಪ್ರೊ. ಎಂ. ಡಿ. ನಂಜುಂಡ ಸ್ವಾಮಿರವರ ನೆನಪಿನ ದಿನಾಚರಣೆ ಮತ್ತು ರಸ್ತೆ ಹಾಗು ವೃತ್ತಕ್ಕೆ ನಾಮಕರಣ, ಯುವ ರೈತ ಘಟಕದ ಚಾಲನಾ ಸಮಾರಂಭ ನಡೆಯಲಿದೆ ಎಂದರು.

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಜಿಲ್ಲಾ ರೈತ ಯುವ ಘಟಕದ ಅಧ್ಯಕ್ಷ ಆದಿತ್ಯ ನಾರಾಯಣ ಕೊಲ್ಲಾಜೆ ಮಾತನಾಡಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು, ಮಹಿಳಾ ಸಭಲಿಕರಣ, ಜನ ಸಾಮಾನ್ಯರ ತೆರಿಗೆ ಹಣ ನಿಜವಾದ ಕಾರ್ಯಕ್ರಮಕ್ಕೆ ವಿನಿಯೋಗ ಮಾಡಲು, ಕಟ್ಟಡ ಕಾರ್ಮಿಕರಿಗೆ ಪಿಂಚಣಿ ಯೋಜನೆ, ಉದ್ಯೋಗ ಸೃಷ್ಟಿ ಮೊದಲಾದ ಉತ್ತಮ ಕೆಲಸ ನಿರ್ವಹಿಸಲು ಸ್ಪರ್ಧಿಸುತ್ತೇನೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಯುವ ಘಟಕದ ಗೌರವ ಅಧ್ಯಕ್ಷ ಸುರೇಂದ್ರ ಕೊರ್ಯ, ಇತರ ರೈತ ಸಂಘದ ಸದಸ್ಯರು ಉಪಸ್ಥಿತರಿದ್ದರು.

See also  ನವದೆಹಲಿ: ಚೀನಾ ಗಡಿ ಒಪ್ಪಂದಗಳನ್ನು ಅನುಸರಿಸದಿರುವುದು ಘರ್ಷಣೆಗೆ ಕಾರಣವಾಗುತ್ತದೆ ಎಂದ ಜೈಶಂಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು