News Kannada
Sunday, April 02 2023

ಮಂಗಳೂರು

ಮೂಡುಬಿದಿರೆ: ಅಶ್ವತ್ಥನಾರಾಯಣ ವಿರುದ್ಧ ಕ್ರಮಕ್ಕೆ ಅಭಯಚಂದ್ರ ಜೈನ್ ಆಗ್ರಹ

Abhaychandra Jain demands action against Ashwathnarayan
Photo Credit : News Kannada

ಮೂಡುಬಿದಿರೆ: ಟಿಪ್ಪುಸುಲ್ತಾನನ್ನು ಹೊಡೆದು ಹಾಕಿದಂತೆ ಸಿದ್ಧರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎನ್ನುವ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವತ್ಥನಾರಾಯಣ ಅವರು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮತ್ತು ತುಚ್ಚವಾದ ಮಾತುಗಳನ್ನು ಆಡಿದ್ದು, ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮತ್ತು ರಾಷ್ಟಪತಿಯವರು ಮುಖ್ಯಮಂತ್ರಿಗೆ ಸೂಚನೆ ನೀಡಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆಗ್ರಹಿಸಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಂತಹ ಮುತ್ಸದ್ಧಿ ರಾಜಕಾರಣಿಗಳನ್ನು ಹೊಂದಿದ್ದ ಬಿಜೆಪಿಯಲ್ಲಿ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕೋಮು ಭಾವನೆ ಕೆರಳಿಸುವಂತಹ ಮಾತು ಆಡಿರುವುದು ಅವರ ಮತ್ತು ಬಿಜೆಪಿ ನಾಯಕರ ಕೀಳು ಮನಸ್ಥಿತಿಯನ್ನು ತೋರಿಸುತ್ತದೆ. ಮತಪಡೆಯವುದಕ್ಕಾಗಿ ಇನ್ನೊಂದು ಪಕ್ಷದ ನಾಯಕರನ್ನು ಟೀಕಿಸುವ ಭರಾಟೆಯಲ್ಲಿ ಕೆಟ್ಟ ಪದಗಳನ್ನು ಬಳಸುವುದು ಯಾವ ನಾಯಕರಿಗೂ ಶೋಭೆ ತರುವಂತದಲ್ಲ ಎಂದರು. ಶಿಕ್ಷಣ ಸಚಿವರ ಮಾತು ಪ್ರಜ್ಞಾವಂತರು ತಲೆತಗ್ಗಿಸುವಂತೆ ಮಾಡಿದೆ ಎಂದು ಹೇಳಿದರು.

See also  ಚಿತ್ರಾಪುರ ಬೀಚ್ ನಲ್ಲಿ ' ಕ್ಲೀನ್ ಬೀಚ್ ' ಅಭಿಯಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು