News Kannada
Wednesday, March 22 2023

ಮಂಗಳೂರು

ಮಂಗಳೂರು: ಅಳಿಯನ ಅಪಹರಣ ಪ್ರಕರಣ, ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಎಫ್ಐಆರ್

FIR lodged against Congress leader Divyaprabha Chiltadka in son-in-law's abduction case
Photo Credit : IANS

ಮಂಗಳೂರು: ಅಳಿಯನ ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕಿ‌, ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅಪಹರಣ ಮಾಡಿ, ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಅಳಿಯ ನವೀನ್ ಗೌಡ ನೀಡಿದ ದೂರಿನಂತೆ ದಿವ್ಯಾಪ್ರಭಾ, ಅವರ ಪುತ್ರಿ (ನವೀನ್ ಪತ್ನಿ) ಸ್ಪಂದನಾ, ದಿವ್ಯಪ್ರಭಾರ ಪತಿ ಪರಶುರಾಮ ಸೇರಿ ಆರು ಜನರ ಮೇಲೆ ಎಫ್.ಐ.ಆರ್. ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿವ್ಯಾಪ್ರಭಾ ಅವರ ಪುತ್ರಿ ಸ್ಪಂದನಾರನ್ನು ಮದುವೆಯಾಗಿದ್ದ ನವೀನ್ ಗೌಡ, ಇತ್ತೀಚೆಗೆ ಕೆಲವು ಕೌಟುಂಬಿಕ ಕಾರಣಗಳಿಂದ ಪತಿ-ಪತ್ನಿ ಇಬ್ಬರೂ ದೂರವಾಗಿದ್ದರೆನ್ನಲಾಗಿದೆ. ಇದೇ ಕಾರಣಕ್ಕೆ ತನ್ನನ್ನು ಮನೆಯಿಂದ ಅಪಹರಣ ಮಾಡಿದ್ದಾರೆ. ನಂತರ ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ‌ ಅಸ್ವಸ್ಥನೆಂದು ಬಿಂಬಿಸಲು ಪ್ರಯತ್ನಪಟ್ಟಿದ್ದಾರೆ ಎಂದು‌ ದೂರಿನಲ್ಲಿ ನವೀನ್ ಗೌಡ ಉಲ್ಲೇಖ ಮಾಡಿದ್ದರು.

ಈ ಸಂಬಂಧ ಪುಟ್ಟೇನಹಳ್ಳಿ‌ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

See also  ಬೆಳಗಾವಿ: ಸರ್ಕಾರ ರೈತರಿಗೆ ಧನಾತ್ಮಕವಾಗಿ ಸ್ಪಂದಿಸಲಿದೆ- ಸಚಿವ ಆರ್. ಅಶೋಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು