News Kannada
Friday, March 24 2023

ಮಂಗಳೂರು

ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ ಅಂಬಾತನಯ ಮುದ್ರಾಡಿ ಇನ್ನಿಲ್ಲ

Veteran writer, Yakshagana arthadhari Ambatanaya Mudradi no more
Photo Credit : Facebook

ಮಂಗಳೂರು: ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ, ನಾಟಕಕಾರ, ಪ್ರಸಂಗಕರ್ತ, ನಿವೃತ್ತ ಪ್ರಾಧ್ಯಾಪಕ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾಗಿದ್ದ ಕೇಶವ ಶೆಟ್ಟಿಗಾರ ಅವರು ಮಂಗಳವಾರ ನಿಧನರಾದರು. ಅವರಿಗೆ 85 ವರ್ಷವಾಗಿತ್ತು. ವಯೋ ಸಹಜ ಅಸೌಖ್ಯದಿಂದ ಇದ್ದ ಇವರು ಇಂದು ಬೆಳಿಗ್ಗೆ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಬಹುಮುಖ ಪ್ರತಿಭೆಯ ಮುದ್ರಾಡಿ ಅವರು ಕೈಯಾಡಿಸದ ಕ್ಷೇತ್ರವಿಲ್ಲ. ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿದ್ದ ಅವರು ಸಾಹಿತ್ಯ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಕೈಯಾಡಿಸಿದರೂ ಕಾವ್ಯ ಅವರಿಗೆ ವಿಶೇಷವಾಗಿ ಒಲಿದಿತ್ತು. ಯಕ್ಷಗಾನ, ನಾಟಕ, ರಂಗಗಳಲ್ಲು ಅವರು ಮಿಂಚಿದ್ದಾರೆ. ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರರಾಗಿದ್ದರೂ. ಕೊನೆಗಾಲದವರೆಗೂ ಬಹಳ ಸಕ್ರಿಯವಾಗಿ ಅವರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಅಂಬಾತನಯ ಮುದ್ರಾಡಿ ಅವರು 1935ರ ಜೂನ್ 4ರಂದು ಜನಿಸಿದರು. ಅವರ ಶಾಲಾ ವಿದ್ಯಾಭ್ಯಾಸ ಎಂಟನೆಯ ತರಗತಿಯವರೆಗೆ ಆದರೂ ಅವರ ಲೋಕಜ್ಞಾನ ವಿಶೇಷವಾದುದು. ಸ್ವಂತ ಆಸಕ್ತಿಯಿಂದ ಅಧ್ಯಯನ ಮಾಡಿ ಬೆಳೆದ ವ್ಯಕ್ತಿತ್ವ ಅಂಬಾತನಯರದು.

 

See also  ನಂಜನಗೂಡು ತಾಲ್ಲೂಕು ಕಛೇರಿಯಲ್ಲಿ ಭ್ರಷ್ಟಾಚಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು