News Kannada
Monday, March 20 2023

ಮಂಗಳೂರು

ಸುರತ್ಕಲ್: ಎಲ್ಲರೂ ಒಗ್ಗೂಡಿ ದುಡಿದಾಗ ಯಶಸ್ಸು ಸಾಧ್ಯ- ಅನಂತ ಪದ್ಮನಾಭ ಅಸ್ರಣ್ಣ

Surathkal: Success is possible only when everyone works together: Anantha Padmanabha Asranna
Photo Credit : News Kannada

ಸುರತ್ಕಲ್: “ಎಲ್ಲರೂ ಒಂದುಗೂಡಿ ದೇವರನ್ನು ಸ್ಮರಿಸಿದಾಗ ಅಥವಾ ದುಡಿದಾಗ ಅಲ್ಲಿ ದೇವರು ಪ್ರಸನ್ನರಾಗುತ್ತಾರೆ, ಯಶಸ್ಸು ಲಭಿಸುತ್ತದೆ” ಎಂದು ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಅನಂತ ಪದ್ಮನಾಭ ಅಸ್ರಣ್ಣ ಹೇಳಿದರು. ಅವರು ಇಲ್ಲಿಗೆ ಸಮೀಪದ ಬಾಳ ತೊತ್ತಾಡಿ ನಾಗಬ್ರಹ್ಮಸ್ಥಾನ ಹಾಗೂ ಪರಿವಾರ ದೈವ ದೇವರುಗಳ ಜೀರ್ಣೋದ್ಧಾರ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ವಿಜ್ಞಾಪನ ಪತ್ರ ಬಿಡುಗಡೆಗೊಳಿಸಿ ಮಾತಾಡುತ್ತಿದ್ದರು. “ದೇವಸ್ಥಾನದ ಬ್ರಹ್ಮಕಲಶಕ್ಕೆ ಈಗಾಗಲೇ ದಿನ ನಿಗದಿಯಾಗಿದ್ದು ಭಕ್ತರು ಕೈಜೋಡಿಸುವ ಮೂಲಕ ಅಭಿವೃದ್ಧಿ ಕಾರ್ಯವನ್ನು ಯಶಸ್ವಿಗೊಳಿಸಬೇಕು” ಎಂದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಅನಂತ ಪದ್ಮನಾಭ ತಂತ್ರಿ ಅವರು, “ದೇವರ ಅನುಗ್ರಹವಿಲ್ಲದೆ ಏನೂ ನಡೆಯುವುದಿಲ್ಲ. ದೇವರ ಅನುಗ್ರಹದಿಂದ ನಾವೆಲ್ಲರೂ ಒಂದಾಗಿದ್ದೇವೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಈಗಾಗಲೇ ಚಾಲನೆ ದೊರೆತಿದ್ದು ಊರ ಪರವೂರ ಭಕ್ತರು ಕಾಯಾ ವಾಚಾ ಮನಸಾ ದುಡಿಯೋಣ” ಎಂದರು.

ವೇದಿಕೆಯಲ್ಲಿ ಸುಬ್ರಹ್ಮಣ್ಯ ರಾವ್, ಅನಂತಪದ್ಮನಾಭ ತಂತ್ರಿ, ಡಾ. ರೋಹಿತ್ ಬೆಂಗಳೂರು, ಆದಿತ್ಯ ಮುಕ್ಕಾಲ್ದಿ ಖಂಡಿಗೆ ಬೀಡು, ಮುಂಬೈ ಸಮಿತಿ ಅಧ್ಯಕ್ಷ ಕುಶಲ ಭಂಡಾರಿ, ದಿವಾಕರ ಆಳ್ವ ತೋಕೂರುಗುತ್ತು, ಜಯ ಶೆಟ್ಟಿ ಕುಡುಂಬೂರುಗುತ್ತು, ಬಾಳ ಪಂಚಾಯತ್ ಅಧ್ಯೆಕ್ಷೆ ಹುಲಿಗಮ್ಮ, ಸುಜಿತ್ ಆಳ್ವ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಆಡಳಿತ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಸಣ್ಣ ಚೌಟ ಬಾಳ ಮೇಗಿನಮನೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಿತ್ತರಂಜನ್ ಭಂಡಾರಿ, ಆಡಳಿತ ಕಮಿಟಿ ಕಾರ್ಯದರ್ಶಿ ವೇಣುವಿನೋದ್ ಶೆಟ್ಟಿ, ಮಾಜಿ ಮೇಯರ್ ಭಾಸ್ಕರ ಕೆ., ಸಂತೋಷ್ ಪೈ, ಗಣೇಶಪುರ ದೇವಸ್ಥಾನದ ಅಧ್ಯಕ್ಷ ಧಮೇಂದ್ರ, ದಯಾನಂದ ಶೆಟ್ಟಿ ಖಂಡಿಗೆ ಬೀಡು, ಸಂತೋಷ್ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

See also  ಮಾಣಿ ಮಠ: ರಾಘವೇಶ್ವರ ಶ್ರೀಗಳಿಂದ ಬ್ರಹ್ಮಕಲಶೋತ್ಸವ ಸಂಪನ್ನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು