News Kannada
Sunday, April 02 2023

ಮಂಗಳೂರು

ಮೂಡುಬಿದಿರೆ: ಬಲಿಪ ಭಾಗವತ, ಅಂಬಾತನಯ ಮುದ್ರಾಡಿಗೆ ಶ್ರದ್ಧಾಂಜಲಿ

Tributes paid to Balipa Bhagavata, Ambatanaya Mudradi
Photo Credit : News Kannada

ಮೂಡುಬಿದಿರೆ: ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತ ದಿ. ಬಲಿಪ ನಾರಾಯಣ ಭಾಗವತ ಹಾಗೂ ಸಾಹಿತಿ ಕೀರ್ತನೆಕಾರ ಅಂಬಾತನಯ ಮುದ್ರಾಡಿಯವರಿಗೆ ಅಭಿಮಾನಿ ಬಳಗದ ವತಿಯಿಂದ ನುಡಿನಮನ ಕಾರ‍್ಯಕ್ರಮವು ಸಮಾಜ ಮಂದಿರದಲ್ಲಿ ಜರಗಿತು.

ಮಾಜಿ ಸಚಿವ ಅಭಯಚಂದ್ರ ಜೈನ್ ನುಡಿನಮನ ಸಲ್ಲಿಸಿ ಬಲಿಪರಿಗೆ ತನ್ನ ಸ್ವರ ಶಕ್ತಿಯಿಂದಲೇ ಪ್ರೇಕ್ಷಕರನ್ನು ಹಿಡಿದಿಡುವ ಸಾಮಥ್ಯವಿತ್ತು. ಯಕ್ಷಗಾನ ಕಲೆಯಲ್ಲಿ ಅಪಾರ ಪ್ರೌಡಿಮೆಯಿತ್ತು. ಅವರ ಬದುಕು ಯುವ ಕಲಾವಿದರಿಗೆ ಆದರ್ಶ ಮತ್ತು ಸ್ಪೂರ್ತಿ. ಅಂಬಾತನಯ ಮುದ್ರಾಡಿಯವರು ಕೀರ್ತನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

ಯಕ್ಷಗಾನ ಕಲಾಪೋಷಕ ಕೆ. ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿ ಬಲಿಪ ಭಾಗವತರು ಕಲಾ ಕ್ಷೇತ್ರದಲ್ಲಿ ಸಾಧಿಸಿದ ಸಿದ್ಧಿ ಸಾಧನೆ, ಕಲಾವಿದರ ಮೇಲೆ ಬೀರಿದ ಪ್ರಭಾವವನ್ನು ವಿವರಿಸಿದರು.

ಇರುವೈಲು ಮೇಳದ ಸಂಚಾಲಕ ಐಕುಮಾರ್ ಶೆಟ್ಟಿ ಯಕ್ಷದೇವ ಮಿತ್ರ ಕಲಾಮಂಡಳಿಯ ಅಧ್ಯಕ್ಷ ದೇವನಂದ ಭಟ್, ಯಕ್ಷದೇಗುಲದ ಸಂಚಾಲಕ ಮಹಾವೀರ ಪಾಂಡಿ, ಯಕ್ಷಮೇನಕದ ಸಂಚಾಲಕ ಸದಾಶಿವ ರಾವ್, ಪಟ್ಲಪೌಂಡೇಷನ್ ನ ಅಧ್ಯಕ್ಷ ಪ್ರೇಮನಾಥ ಮಾರ್ಲ, ಪತ್ರಕರ್ತ ಧನಂಜಯ ಮೂಡುಬಿದಿರೆ, ಪಡಿಯಾರ್ ಮೃತರ ಗುಣಗಾನ ನಡೆಸಿದರು. ಬಳಿಕ ಮೌನ ಪ್ರಾರ್ಥನೆ ಮೂಲಕ ಸಂತಾಪ ಸಲ್ಲಿಸಲಾಯಿತು.

See also  ಅಂತರ ವಿವಿ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು