News Kannada
Tuesday, October 03 2023
ಪರಿಸರ

ಬೆಳ್ತಂಗಡಿ: ಲಾಯಿಲ ಗ್ರಾಮದ ಗುರಿಂಗಾನದಲ್ಲಿ ಭಾರೀ ಅಗ್ನಿ ಅನಾಹುತ

Belthangady: A major fire broke out at Guringana in Layila village in Belthangady.
Photo Credit : By Author

ಬೆಳ್ತಂಗಡಿ: ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ. ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ  ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ.

ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಅವಾಗಲೇಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು  ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ ಗ್ರಾಮ  ಪಂಚಾಯತ್ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶತಪ್ರಯತ್ನ ಮಾಡುತಿದ್ದಾರೆ.

ಕಳೆದ ವಾರವಷ್ಟೇ ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಅಗ್ನಿಶಾಮಕ ಇಲಾಖೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು. ಸ್ಥಳೀಯರ ಸಮಯಪ್ರಜ್ಙೆಯಿಂದ ದೊಡ್ಡ ಅನಾಹುತ ತಪ್ಪಿತ್ತು.

See also  ಸುಳ್ಯ: ಡಿ ಕೆ ಶಿವಕುಮಾರ್ ಮೇಲೆ ವಾರಂಟ್ - ಅಕ್ಟೋಬರ್ 5 ರಂದು ನ್ಯಾಯಾಲಯಕ್ಕೆ ಹಾಜರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು