News Kannada
Tuesday, March 28 2023

ಮಂಗಳೂರು

ಬಂಟ್ವಾಳ: ಪುದು ಗ್ರಾಪಂ ಕಾಂಗ್ರೆಸ್‌ ಬೆಂಬಲಿತರಿಗೆ ಅಧಿಕಾರ

Power to Congress supporters in Pudu gram panchayat
Photo Credit : News Kannada

ಬಂಟ್ವಾಳ: ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಗೆ ಫೆ.25 ರಂದು‌ ನಡೆದ ಚುನಾವಣೆಯ ಮತ ಎಣಿಕೆ ಶನಿವಾರ ಬಿ.ಸಿ.ರೋಡಿನ ಆಡಳಿತ ಸೌಧದಲ್ಲಿ ಮಂಗಳವಾರ ನಡೆದಿದ್ದು,ರಾತ್ರಿ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟಗೊಂಡು ನಿರೀಕ್ಷೆಯಂತೆ ಕಾಂಗ್ರೆಸ್ ಬೆಂಬಲಿತರು 21 ಸ್ಥಾನಗಳಲ್ಲಿ ಜಯಭೇರಿ ಸಾಧಿಸುವ ಮೂಲಕ ಮರಳಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಎಸ್.ಡಿ.ಪಿ.ಐ. ಬೆಂಬಲಿತ 7 ಸ್ಥಾನಗಳಲ್ಲಿ ಗೆಲುವನ್ನು ದಾಖಲಿಸಿದರೆ, ನಿರೀಕ್ಷಿತ 6 ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು‌ ಗೆಲುವು ಸಾಧಿಸಿದ್ದಾರೆ.

ಕಳೆದ ಅವಧಿಯಲ್ಲಿ 27 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಬೆಂಬಲಿತರು   ಈ ಚುನಾವಣೆಯಲ್ಲಿ ಆರು ಸ್ಥಾನವನ್ನು ಕಳೆದುಕೊಂಡಿದ್ದು,ಒಂದು ಸ್ಥಾನದಲ್ಲಿದ್ದ ಎಸ್ ಡಿಪಿಐ  ಆರು ಸ್ಥಾನವನ್ನು ಹೆಚ್ಚಿಸಿಕೊಂಡು 7 ಸ್ಥಾನ ಪಡೆದು ಬೀಗಿದೆ.ಇತ್ತ ಬಿಜೆಪಿ ಬೆಂಬಲಿತರು ನಿರೀಕ್ಷಿತ ಆರುಸ್ಥಾನವನ್ನು  ಪಡೆದು ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.

ರಿಯಾಜ್,ಮಹಮ್ಮದ್,ಇಸಾಮ್,ರಜಿಯಾ,ರಮ್ಲಾನ್,ರಜಾಕ್,ಮಹಮ್ಮದ್ ಅನ್ಸ್,ಸಹರಾ,ಅಥಿಕಾ ,ಲಿಡಿಯಾ ಪಿಂಟೋ,ಇಕ್ಬಾಲ್ ಸುಜೀರ್, ಈಶು ಕುಮಾರ್, , ರೆಹನಾ, ಹುಸೈನ್ ಪಾಡಿ, ನಬೀಸಾ, ರುಕ್ಸಾನ, ಜಯಂತಿ, ರಶೀದಾಬಾನು (ಎಲ್ಲರೂ ಕಾಂಗ್ರೆಸ್ ಬೆಂಬಲಿತ ವಿಜೇತರು) ಪದ್ಮನಾಭ ಶೆಟ್ಟಿ ಪುಂಚಮೆ, ಸುಬ್ರಹ್ಮಣ್ಯರಾವ್, ಸುಗುಣ, ಮನೋಜ್ ಅಚಾರ್ಯ ನಾಣ್ಯ, ಸೋಮನಾಥ, ವಿದ್ಯಾ ( ಬಿಜೆಪಿ ಬೆಂಬಲಿತ ವಿಜೇತರು), ನವೀನ್ ಸಲ್ದಾನ, ರುಕ್ಸಾನ, ಖೈರುನ್ನಿಸಾ, ಶಾಫಿ ಅಮ್ಮೆಮಾರ್, ನಜೀರ್, ರೆಬೇಕಾ ಸಲ್ದಾನ, ಖೈರುನ್ನಿಸಾಸಿರಾಜ್ ( ಎಸ್ ಡಿಪಿಐ ಬೆಂಬಲಿತ ವಿಜೇತರು)

ತಹಶೀಲ್ದಾರ್ ದಯಾನಂದ ಕೆ.ಎಸ್.ಹಾಗೂ ಉಪತಹಸೀಲ್ದಾರ್ ನವೀನ್ ಬೆಂಜನಪದವು ಅವರ ನೇತೃತ್ವದಲ್ಲಿ ಬೆಳಿಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆ ರಾತ್ರಿ 8.30 ರವರ ವೇಳೆಗೆ ಪೂರ್ಣಗೊಂಡಿತು.

ಪುದು ಪಂಚಾಯತ್ ನ 10 ವಾಡ್೯ ನ ಒಟ್ಟು 34 ಸ್ಥಾನಗಳಿಗೆ 99 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಬಾರಿ ಮತಪತ್ರದ ಮೂಲಕವೇ ಮತದಾನ ನಡೆದಿದ್ದರಿಂದ ಮತ ಎಣಿಕೆ ಕಾರ್ಯ ನಿಧಾನಗತಿಯಲ್ಲಿ ಸಾಗಿತ್ತು.

ಪುದು ಗ್ರಾ.ಪಂ.ನಲ್ಲಿ ಒಟ್ಟು 11,164 ಮತದಾರರ ಪೈಕಿ 8,228 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು ,ಇದರಲ್ಲಿ 5730 ಗಂಡಸರ ಪೈಕಿ 4060 ಹಾಗೂ 5534 ಮಹಿಳೆಯರ ಪೈಕಿ 4168 ಮಂದಿ ಮತ ಚಲಾಯಿಸಿದ್ದಾರೆ.

ಮತ ಎಣಿಕಾ ಕೇಂದ್ರವಾದ ಬಿ.ಸಿ.ರೋಡಿನ ಆಡಳಿತ ಸೌಧದ ಮುಂಭಾಗ ಕಾಂಗ್ರೆಸ್ ಮತ್ತ ಎಸ್ ಡಿ ಪಿ ಐ ಪಕ್ಷದ ಬೆಂಬಲಿತರು‌ ಜಮಾಯಿಸಿದ್ದರು.ಅವರವರ ಅಭ್ಯರ್ಥಿಗಳ ಗೆಲುವಿನ ಘೋಷಣೆಯಾಗುತ್ತಿದ್ದಂತೆ ಜೈಕಾರ ಮೊಳಗುತಿತ್ತು.ಬಂಟ್ವಾಳ ನಗರ ಪೊಲೀಸರು ವ್ಯಾಪಕ ಬಂದೋಬಸ್ತು ಏರ್ಪಡಿಸಿದ್ದರು.

ನಿಷೇದಾಜ್ಞೆ ಜಾರಿ:
ಮತ ಎಣಿಕೆಯ ಹಿನ್ನಲೆಯಲ್ಲಿ ವಿಜೇತ ಅಭ್ಯರ್ಥಿಗಳ ವಿಜಯೋತ್ಸವ ನಡೆಸದಂತೆ ಅತೀ ಸೂಕ್ಷ್ಮ ಪ್ರದೇಶವಾಗಿರುವ ಹಿನ್ನಲೆಯಲ್ಲಿ‌ ಪುದುಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ‌ ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ನಿಷೇದಾಜ್ಞೆಯನ್ನು‌ ತಾಲೂಕಾಡಳಿತ ವಿಧಿಸಿತ್ತು.

See also  ಮಂಗಳೂರು: ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು