News Kannada
Thursday, March 30 2023

ಮಂಗಳೂರು

ಮೂಡುಬಿದಿರೆ: ಸರಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ

Protest against corruption in government departments
Photo Credit : News Kannada

ಮೂಡುಬಿದಿರೆ: ಕಾಮಗಾರಿಗಳನ್ನು ತನ್ನ ಸಂಬಂಧಿಕರಿಗೆ ಕಾಂಟ್ರಾಕ್ಟ್ ನೀಡಿ ತಾನು ಕೋಟಿ ಸಂಪಾದಿಸುತ್ತಿದ್ದರೂ ನಾನು ಬಡವ ನಾನು ಬಡವ ಎಂದು ಹೇಳುವ ಮೂಡುಬಿದಿರೆಯ ಶಾಸಕರು ಇದೀಗ ಎಷ್ಟು ಕೋಟಿಯ ಧನಿಕ ಎಂಬುದನ್ನು ಸಾಬೀತು ಪಡಿಸಲಿ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಸವಾಲು ಎಸೆದಿದ್ದಾರೆ.

ಅವರು ತಾಲೂಕು ಕಚೇರಿ ಸೇರಿದಂತೆ ಇಲ್ಲಿನ ವಿವಿಧ ಸರಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮತ್ತು ಶಾಸಕ ಉಮಾನಾಥ ಕೋಟ್ಯಾನ್ ಅವರ ಕಾರ್ಯವೈಖರಿಯನ್ನು ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಹಿಂದಿನ ಶಾಸಕರು ಶ್ರೀಮಂತರು ಎಂದು ಹೇಳುತ್ತಿದ್ದ ಶಾಸಕರು ಇದೀಗ ನಮಗಿಂತ ಹತ್ತುಪಟ್ಟು ಆಸ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಬಡವ ಹೋಗಿ ಬಡುವು ಆಗಿದ್ದಾರೆ ಎಂದು ಆರೋಪಿದರು. ತನ್ನ ಶಾಸಕತ್ವದ ಅವಧಿಯಲ್ಲಿ ರಿಕ್ಷಾ ಬಿಡುತ್ತಿದ್ದವರು ಈಗ ಕೋಟ್ಯಾಧಿಪತಿಗಳಾಗಿದ್ದಾರೆ. ಶಾಸಕರ ಸಂಬಂಧಿಕರು ಕೋಟ್ಯಾಧಿಪತಿಗಳಾಗುತ್ತಿದ್ದಾರೆ ಇದರಿಂದ ಗೊತ್ತಾಗುತ್ತಿದೆ ಎಂಎಲ್ ಎ ಎಷ್ಟು ಒಳ್ಳೆಯವರೆಂದು. ಐಬಿಯನ್ನು ಕೆಡವಲು ಹೊರಟಿರುವುದು ಓರ್ವ ಅನ್ನ ತಿನ್ನುವ ವ್ಯಕ್ತಿ ಮಾಡುವ ಕೆಲಸವಲ್ಲ. ಮರಳು ದಂಧೆಕೋರರಿಗೆ ಪ್ರೋತ್ಸಾಹ ನೀಡುತ್ತಿರುವುದು ಸರಿಯಲ್ಲ. ಪುರಸಭೆಯಿಂದ ಅನುಮತಿ ಪಡೆದುಕೊಳ್ಳದೆ ಇದೀಗ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪಕ್ಷದ ಕಾರ್ಯಕರ್ತರಿಗೆ ನಂದಿನಿ ಹಾಲಿನ ಡೈರಿಯನ್ನು ಮಾಡಿಕೊಡುತ್ತಿದ್ದಾರೆ ಹೀಗೆ ಹಲವು ಭ್ರಷ್ಟಾಚಾರದಲ್ಲಿ ಶಾಸಕರು ಶಾಮೀಲಾಗುತ್ತಿದ್ದಾರೆಂದು ಆರೋಪಿಸಿದರು.

ಬೇರೆ ಎಲ್ಲಾ ಕಾಮಗಾರಿಗಳನ್ನು ಅತೀ ವೇಗದಲ್ಲಿ ಮಾಡಿಕೊಡುತ್ತಿರುವ ಶಾಸಕರು ಯುಜಿಡಿ ಮತ್ತು ಮಾರ್ಕೆಟಿನ ಬಗ್ಗೆ ಕಾರ್ಯಪ್ರವೃತರಾಗಲಿ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ ಭ್ರಷ್ಟಾಚಾರದ ಸರಕಾರ ಬಿಜೆಪಿ. ಇಲ್ಲಿನ ಶಾಸಕರು ಮತ್ತು ಅವರ ಆಪ್ತರು ಶೇ 40 ಕಮೀಷನ್ ಗಾಗಿ ಇರುವವರು ಮತ್ತು ಸರಕಾರದ ಬೊಕ್ಕಸವನ್ನು ಲೂಟಿ ಮಾಡುವವರು ಎಂದು ಆರೋಪಿಸಿದರು.

ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ರೈತ ಸಂಘದ ಆಲ್ವೀನ್ ಮಿನೇಜಸ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಪುರಸಭಾ ಸದಸ್ಯ ಸುರೇಶ್ ಪ್ರಭು, ಹಿಮಾಯುತ್ತುಲ್, ಪುರಂದರ ದೇವಾಡಿಗ, ಜೊಸ್ಸಿ ಮಿನೇಜಸ್, ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ, ಪಡುಮಾರ್ನಾಡು ಗ್ರಾ.ಪಂ .ಉಪಾಧ್ಯಕ್ಷ ಅಭಿನಂದನ್ ಬಲ್ಲಾಳ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ , ಪಂಚಾಯತ್ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಲೂಕು ತಹಶೀಲ್ದಾರ್ ಸಚ್ಚಿದಾನಂದ ಸತ್ಯಪ್ಪ ಕುಚನೂರು ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

See also  ಮಂಗಳೂರು: ಫೆ. 25, 26ರಂದು 'ಬಿಷನ್-2023' ಹಾಗೂ 'ಸಾನಿಧ್ಯ ಉತ್ಸವ' ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು