News Kannada
Sunday, October 01 2023
ಮಂಗಳೂರು

ಕೇಂದ್ರ ಹಾಗೂ ರಾಜ್ಯ ಸರಕಾರದ ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ- ರಾಜೇಶ್ ನಾಯ್ಕ್

Take advantage of all central and state government schemes: Rajesh Naik
Photo Credit : News Kannada

ಬಂಟ್ವಾಳ: ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳು ಗ್ರಾಮದ ಫಲಾನುಭವಿಗಳಿಗೆ ನೇರವಾಗಿ ಸಿಗುವ ಸುಲಭವಾದ ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕಲ್ಪಿಸಿದ್ದಾರೆ. ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಬುಧವಾರ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನೀರಿನ ಟ್ಯಾಂಕ್, ಕಲಿಕಾ ಪ್ರೋತ್ಸಾಹ ಧನ ಹಾಗೂ ವಿವಿಧ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದರು.

ಶಿಕ್ಷಣ ಮತ್ತು ಆರೋಗ್ಯದ ಸೌಲಭ್ಯಗಳು ಸರಕಾರದಿಂದ ಉಚಿತವಾಗಿ ಸಿಕ್ಕಾಗ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬ ನಿಟ್ಟಿನಲ್ಲಿ ಸರಕಾರ ಸೌಲಭ್ಯಗಳನ್ನು ನೀಡಿದೆ ಎಂದರು.

ಅಮ್ಟಾಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 10 ಕೋಟಿ ರೂಪಾಯಿ ಅನುದಾನವನ್ನು ಬಳಕೆ ಮಾಡಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ಶಾಕರು ತಿಳಿಸಿದರು. ಗ್ರಾಮಗಳಲ್ಲಿ ನೀರಿನ ಇಂಗುವಿಕೆಯ ಮೂಲಕ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂಬ ನಿಟ್ಟಿನಲ್ಲಿ ಸಣ್ಣ ಸಣ್ಣ ತೋಡುಗಳಿಗೆ ಚೆಕ್ ಡ್ಯಾಂ ಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರತಿಯೊಂದು ಮನೆಗೆ ಶುಧ್ದವಾದ ಕುಡಿಯುವ ನೀರು ಪೂರೈಕೆ ಪ್ರಧಾನಿಯವರ ಆಶಯದಂತೆ ಜೆಜೆಎಂ ಮೂಲಕ ನಳ್ಳಿ ನೀರು ಪೂರೈಕೆಯ ಯೋಜನೆ ಜಾರಿ ಮಾಡಲಾಗಿದೆ.ಸರಕಾರ ಪ್ರತಿಯೊಂದು ಯೋಜನೆ ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ಗ್ರಾಮಪಂಚಾಯತ್ ಅಧ್ಯಕ್ಷೆ ಮೋಹಿನಿ,ಉಪಾಧ್ಯಕ್ಷ ಸುನಿಲ್ , ಸದಸ್ಯರಾದ ಹರೀಶ್ ಶೆಟ್ಟಿ ಪಡು, ವಿಜಯ್, ಯಶವಂತ ಶೆಟ್ಟಿ, ಪೂರ್ಣಿಮಾ, ವಿಶ್ವನಾಥ ಕಲಾಯಿ, ಭಾರತಿ ಚೌಟ , ಫೆಲಿಕ್ಸಡಿ.ಸೋಜ, ಯಶೋಧರೆ,ಚಂದ್ರಾವತಿ, ಸೌಮ್ಯ ಪಿ.ಡಿ.ಒ.ರವಿ , ಕಾರ್ಯದರ್ಶಿ ಲಕ್ಮೀನಾರಾಯಣ ಉಪಸ್ಥಿತರಿದ್ದರು. ಲೋಕೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

See also  ಎ. ಜೆ. ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದ ಮೊದಲನೇ ಯಶಸ್ವಿ ರೋಬೋಟಿಕ್ ವಿಪ್ಪಲ್ ಶಸ್ತ್ರಚಿಕಿತ್ಸೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು