News Kannada
Thursday, March 23 2023

ಮಂಗಳೂರು

ಲೋಕಾಯುಕ್ತವನ್ನು ಮುಗಿಸಿದ ಕಾಂಗ್ರೆಸಿಗರಿಂದ ಭ್ರಷ್ಟಾಚಾರದ ಪಾಠ ಕಲಿಯಬೇಕಿಲ್ಲ- ಡಾ. ಭರತ್ ಶೆಟ್ಟಿ ವೈ

Don't have to learn lessons of corruption from Congressmen who have completed Lokayukta: Dr. Bharath Shetty Y
Photo Credit : News Kannada

ಸುರತ್ಕಲ್: ಭ್ರಷ್ಟಾಚಾರ ನಿಗ್ರಹಕ್ಕೆ ಜಾರಿಗೆ ತಂದಿದ್ದ ಲೋಕಾಯುಕ್ತವನ್ನು ಉಸಿರು ಕಟ್ಟಿಸಿ ಮುಗಿಸಿದ್ದೇ ಹಿಂದಿನ ಕಾಂಗ್ರೆಸ್ ಸರಕಾರ. ಹೀಗಿರುವಾಗ ಅದೇ ಕಾಂಗ್ರೆಸ್ ಮುಖಂಡರಿಂದ ಭ್ರಷ್ಟಾಚಾರದ ಬಗ್ಗೆ ಪಾಠ ಕಲಿಯುವ ಅಗತ್ಯವಿಲ್ಲ. ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೆವಾಲಾ ಕರ್ನಾಟಕ ಸರಕಾರ, ಮುಖ್ಯಮಂತ್ರಿಯವರ ಬಗ್ಗೆ ಕೇವಲವಾಗಿ ಮಾತಾಡುವ ಮುನ್ನ ಅವರದ್ದೇ ಸರಕಾರ, ಮುಖಂಡರ ಭ್ರಷ್ಟಾಚಾರ ಮತ್ತು ಹಗರಣಗಳ ಬಗ್ಗೆ ತಿಳಿದುಕೊಳ್ಳುವುದು ಉತ್ತಮ” ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಹೇಳಿದ್ದಾರೆ.

“ನನ್ನ ಕ್ಷೇತ್ರದ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಕಳೆದ ಚುನಾವಣೆ ಸಂದರ್ಭ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ 500 ಕೋಟಿ ರೂ. ಮೊತ್ತದ ಕಾಮಗಾರಿ ನಡೆಸಿದ್ದಾಗಿ ಹೇಳಿದ್ದರು. ಆದರೆ ನಾನು ನನ್ನ ಕ್ಷೇತ್ರದಲ್ಲಿ ಎರಡು ವರ್ಷ ಕೊರೋನಾ ಸಂಕಷ್ಟದ ಅವಧಿಯನ್ನು ಹೊರತುಪಡಿಸಿ 2000 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇನೆ” ಎಂದು ಭರತ್ ಶೆಟ್ಟಿ ತಿರುಗೇಟು ನೀಡಿದರು.

See also  ಮಂಗಳೂರು: ಕರಾವಳಿಯಲ್ಲಿ ಮತ್ತೆ ಹೆಚ್ಚಾಗುತ್ತಿದೆ ಇಲಿ ಜ್ವರ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು