News Kannada
Thursday, March 23 2023

ಮಂಗಳೂರು

ಪತ್ರಿಕಾ ರಂಗದಲ್ಲಿ ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದ್ದು ಪತ್ರಕರ್ತರ ಧರ್ಮ

It is the duty of journalists to work fearlessly in the face of criticism and criticism in the press: K Sadashiva Shenoy
Photo Credit : News Kannada

ಮಂಗಳೂರು: ಪತ್ರಿಕಾ ರಂಗದಲ್ಲಿ ಸೂಕ್ಷ್ಮ, ಸಂವೇದನಾಶೀಲ ಬೆಳೆಸಿಕೊಂಡು ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದ್ದು ಪತ್ರಕರ್ತರ ಧರ್ಮ. ಅದೇ ರೀತಿ ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಕೂಡ ಪತ್ರಕರ್ತರದ್ದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ ಶೆಣೈ ಹೇಳಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್(ರಿ), ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ಭಾನುವಾರ ನಗರದ ಬೋಳೂರು ಕುಡ್ಲಕುದ್ರುವಿನ ಪ್ಯಾರಡೈಸ್ ಐಲ್ಯಾಂಡ್‌ನಲ್ಲಿ ನಡೆದ ಪ್ರೆಸ್ ಕ್ಲಬ್ ದಿನಾಚರಣೆ
ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರು ಪ್ರಶಸ್ತಿ, ಸನ್ಮಾನಗಳಿಗಿಂತ ಲೇಖನಿ ಮೂಲಕ ಜನತೆಗೆ ಸಹಾಯ ಮಾಡುತ್ತಾರೆ. ಮಂಗಳೂರಿನ ಪತ್ರಕರ್ತರಿಗೆ ವಿಶೇಷ ಸ್ಥಾನಮಾನ ಇದೆ. ರಾಜ್ಯದ ಎಲ್ಲ ಕಡೆಗಳಲ್ಲಿ ಗೌರವದ ಹೆಸರು ಇದೆ. ಸಮಾಜಮುಖಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಅಭಿನಂದನೀಯ. ಬೀದಿನಾಯಿ ಬಗೆಗಿನ ಕಾಳಜಿಗೆ ಪ್ರಶಸ್ತಿ ಸಂದಿರುವುದು ಸಂತಸ ತಂದಿದೆ ಎಂದರು.

ರಜನಿ ಶೆಟ್ಟಿಗೆ ಪ್ರೆಸ್‌ಕ್ಲಬ್ ಪ್ರಶಸ್ತಿ:
ಇದೇ ಸಂದರ್ಭ ಬೀಡಾಡಿ ನಾಯಿಗಳ ಪೋಷಕಿ ಮಂಗಳೂರಿನ ರಜನಿ ಶೆಟ್ಟಿ ಅವರಿಗೆ 2022ರ ಸಾಲಿನ ಪ್ರೆಸ್‌ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಚಲನಚಿತ್ರ ನಟ ರೂಪೇಶ್ ಶೆಟ್ಟಿ, ನನ್ನ ಏಳ್ಗೆಗೆ ಮಾಧ್ಯಮಗಳೂ ಕಾರಣವಾಗಿದೆ. ನಾನೂ ಪತ್ರಕರ್ತನಾಗಿದ್ದು, ಸದ್ಯ ಚಿತ್ರನಟನೆಯಲ್ಲಿ ಬ್ಯೂಸಿ ಆಗಿದ್ದೇನೆ. ಪತ್ರಕರ್ತರಿಗೂ ಕಾರ್ಯದ ಒತ್ತಡದಿಂದ ತುಸು ಬಿಡುವು ಪಡೆಯಲು ಇಂತಹ ಕಾರ್ಯಕ್ರಮಗಳ ಅತ್ಯಗತ್ಯ ಎಂದರು.

ಜವಾಬ್ದಾರಿ ಹೆಚ್ಚಿದೆ:
ಸನ್ಮಾನ ಸ್ವೀಕರಿಸಿ ಮಾತನಾಡಿದ ರಜನಿ ಶೆಟ್ಟಿ, ಕಳೆದ 22 ವರ್ಷಗಳಿಂದ ಬೀಡಾಡಿ ನಾಯಿಗಳಿಗೆ ಆಶ್ರಯ ನೀಡುತ್ತಿದ್ದೇನೆ. ನಮ್ಮಷ್ಟೆ ಬದುಕುವ ಅಧಿಕಾರ ಮೂಕಪ್ರಾಣಿಗಳಿಗೂ ಇದೆ. ನನ್ನ ಈ ಕಾರ್ಯಕ್ಕೆ ಟೀಕೆ, ವಿರೋಧಗಳೂ ವ್ಯಕ್ತವಾಗಿದೆ. ಆದರೂ ಹಿಮ್ಮೆಟ್ಟದೆ ಪ್ರಾಣಿ ಪ್ರೇಮಿಗಳ ನೆರವು ಹಾಗೂ ಪ್ರೋತ್ಸಾಹದಿಂದ ಬೀಡಾಡಿ ನಾಯಿಗಳ ಆರೈಕೆ ಮಾಡುತ್ತಿದ್ದೇನೆ. ಈಗ 800 ಬೀಡಾಡಿ ನಾಯಿಗಳಿಗೆ ನಿತ್ಯವೂ ಆಹಾರ ಉಣಿಸುತ್ತಿದ್ದೇನೆ. ಪ್ರೆಸ್‌ಕ್ಲಬ್ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಇನ್ನೂ ಹೆಚ್ಚಿದೆ ಎಂದರು.

ಇಸಿಜಿ ಯಂತ್ರ, ವೋಚರ್ ಹಸ್ತಾಂತರ:
ಬೆಳ್ತಂಗಡಿ ಹಾಗೂ ಮೂಡುಬಿದಿರೆ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಸುಮಾರು 2.50 ಲಕ್ಷ ರು. ಮೌಲ್ಯದ ಉಚಿತ ಇಸಿಜಿ ಯಂತ್ರದ ಕೊಡುಗೆ ಹಾಗೂ ಹೃದ್ರೋಗ ತಪಾಸಣೆಯ ಉಚಿತ ಕೂಪನ್‌ನ್ನು ಮಂಗಳೂರಿನ ಪ್ರಸಿದ್ಧ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಹಸ್ತಾಂತರಿಸಿದರು. ನಿರ್ಜನ, ಗುಡ್ಡಗಾಡು ಪ್ರದೇಶ ಹಾಗೂ ವೈದ್ಯರಿಲ್ಲದ ಹಳ್ಳಿಗಳಿಗೆ ಇಸಿಜಿ ಯಂತ್ರವನ್ನು ಉಚಿತವಾಗಿ ನೀಡಲಾಗಿದೆ. ಕಡಬ ಹೋಬಳಿಯ ಎಲ್ಲ ಹಳ್ಳಿಗಳಿಗೆ ಇಸಿಜಿ ಯಂತ್ರ ನೀಡುವ ಉದ್ದೇಶ ಹೊಂದಲಾಗಿದೆ. ಇದು ಹೃದ್ರೋಗದ ತುರ್ತು ಸಂದರ್ಭಗಳಲ್ಲಿ ನೆರವಿಗೆ ಬರುವುದು ಸಮಾಧಾನ ಸಂಗತಿ ಎಂದರು.

ಹಿರಿಯ ಪತ್ರಕರ್ತರಿಗೆ ಗೌರವ:
ಇದೇ ವೇಳೆ ಹಿರಿಯ ಪತ್ರಕರ್ತರಾದ ಜಿನ್ನಪ್ಪ ಗೌಡ, ರಾಮಕೃಷ್ಣ ಆರ್., ಐ.ಬಿ.ಸಂದೀಪ್ ಕುಮಾರ್, ಕೆ.ಟಿ.ವಿನೋಬ, ಪ್ರಕಾಶ್ ಇಳಂತಿಲ, ಪುಷ್ಪರಾಜ್ ಬಿ.ಎನ್, ರಾಮಕೃಷ್ಣ ಭಟ್, ಇಬ್ರಾಹಿಂ ಅಡ್ಕಸ್ಥಳ, ರವೀಂದ್ರ ಶೆಟ್ಟಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

See also  ಕಾಸರಗೋಡು: ರೈಲ್ವೆ ಹಳಿಯಲ್ಲಿ ಇಬ್ಬರು ಹೊರ ರಾಜ್ಯ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಅವರು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಆನಂದ ಶೆಟ್ಟಿ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಆರಿಫ್ ಪಡುಬಿದ್ರಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಸದಸ್ಯ ಪಿ.ಬಿ.ಹರೀಶ್ ರೈ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಇದ್ದರು. ಪತ್ರಕರ್ತರಾದ ಆತ್ಮಭೂಷಣ್, ಹರೀಶ್ ಮೋಟುಕಾನ ಪರಿಚಯ ನೆರವೇರಿಸಿದರು. ಪತ್ರಕರ್ತ ದಿನೇಶ್ ಇರಾ ನಿರೂಪಿಸಿದರು. ಸಮಾರಂಭದಲ್ಲಿ ನಿಖಿಲ್ ನಿರೂಪಣೆಯಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಆಟೋಟ ಏರ್ಪಟ್ಟಿತು.

ಜೂ.23ರಂದು ‘ಸರ್ಕಸ್’ ಸಿನಿಮಾ ತೆರೆಗೆ
ಚಿತ್ರನಟ ರೂಪೇಶ್ ಶೆಟ್ಟಿ ಅಭಿಯನದ ಬಹುನಿರೀಕ್ಷಿತ ಸಿನಿಮಾ ‘ಸರ್ಕಸ್’ ಜೂ.23ರಂದು ತೆರೆ ಕಾಣಲಿದೆ. ಇದರ ಅಧಿಕೃತ ಘೋಷಣೆ ಮಾ.6ರಂದು ಹೊರಡಿಸಲಾಗುತ್ತದೆ ಎಂದು ಸ್ವತಃ ರೂಪೇಶ್ ಶೆಟ್ಟಿ ಬಹಿರಂಗಪಡಿಸಿದರು. ಬಿಗ್‌ಬಾಸ್‌ನಲ್ಲಿ ಗೆಲವಿಗೆ ನನ್ನನ್ನು ಪ್ರೋತ್ಸಾಹಿಸಿದ ಎಲ್ಲರಿಗೂ ಆ ಗೌರವ ಸಲ್ಲುತ್ತದೆ. ಈವರೆಗೆ 15 ಸಿನಿಮಾದಲ್ಲಿ ಅಭಿನಯಿಸಿದ್ದು, ಎಲ್ಲರ ಹಾರೈಕೆಯಿಂದ ನಟನಾಗಿದ್ದೇನೆ. ಒಟಿಟಿ ಮತ್ತು ಟಿವಿ ಚಾನೆಲ್ ಸೇರಿ ಬಿಗ್‌ಬಾಸ್‌ನಲ್ಲಿ ನನ್ನನ್ನು ಗೆಲ್ಲಿಸಿ ಇತಿಹಾಸ ನಿರ್ಮಿಸಲಾಗಿದೆ. ನನ್ನ ಅಭಿಮಾನಿಗಳಿಗೆ ಸದಾ ಚಿರಋಣಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು