News Kannada
Monday, March 20 2023

ಮಂಗಳೂರು

ಮಂಗಳೂರು: ಹೋಳಿ, ಪ್ರಾಣಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಸಲಹೆ

Holi, animals advised to be careful not to be disturbed
Photo Credit : News Kannada

ಮಂಗಳೂರು: ರಾಜ್ಯಾದ್ಯಂತ ಇದೇ ಮಾ.8ರಂದು ಹೋಳಿ ಹಬ್ಬ ಆಚರಿಸಲಾಗುತ್ತದೆ. ಹೋಳಿ ಹಬ್ಬದ ಪ್ರಮುಖ ಆಕರ್ಷಣೆ ಬಣ್ಣ ಎರಚುವುದು. ಬಣ್ಣ ಎರಚುವ ಸಮಯದಲ್ಲಿ ಮೂಕ ಪ್ರಾಣಿಗಳು ನೇರವಾಗಿ ಅಥವಾ ಪರೋಕ್ಷವಾಗಿ ಬಣ್ಣಗಳ ಹಾನಿಕಾರಕ ಪರಿಣಾಮಗಳಿಗೆ ಒಳಪಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಹಬ್ಬದ ಸಂಭ್ರಮದ ಆಚರಣೆಯ ಜತೆಗೆ ಮುಗ್ದ ಪ್ರಾಣಿಗಳ ಸುರಕ್ಷತೆ ಮತ್ತು ಅವುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿರುತ್ತದೆ.

ಆ ಕಾರಣ ಸಾರ್ವಜನಿಕರು ಹೋಳಿ ಹಬ್ಬದ ಅಚರಣೆ ಸಮಯದಲ್ಲಿ ಮೂಕ ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದಂತೆ ಹಬ್ಬವನ್ನು ಆಚರಿಸಬೇಕು ಹಾಗೂ ಪ್ರಾಣಿಗಳ ಮೇಲೆ ಬಣ್ಣ ಎರಚುವುದು ಕಂಡುಬಂದಲ್ಲಿ ಪ್ರಾಣಿಗಳ ದೌರ್ಜನ್ಯ ತಡೆ ಕಾಯಿದೆ 1960 ಸೆಕ್ಷನ್ 11ರ ಪ್ರಕಾರ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಸದಸ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಚೆನ್ನೈ: ಫೆ.18ರಂದು ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಲಿರುವ ದ್ರೌಪದಿ ಮುರ್ಮು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು