News Kannada
Thursday, March 30 2023

ಮಂಗಳೂರು

ಬಂಟ್ವಾಳ: ಸಿಮೆಂಟ್ ಮಿಶ್ರಣ ಘಟಕ ಕಾರ್ಯಾಚರಣೆಯಿಂದ ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ

Bantwal: Local residents are facing problems due to the operation of cement mixing unit
Photo Credit : News Kannada

ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಅಗ್ರಹಾರ ಬೀದಿ ಎಂಬಲ್ಲಿ ಜನವಸತಿಗೆ ಅತ್ಯಂತ ಸಮೀಪದಲ್ಲೇ ಸಿಮೆಂಟ್ ಮಿಶ್ರಣ ಘಟಕ ಕಾರ್ಯಾಚರಿಸುತ್ತಿದ್ದು, ಇದರಿಂದ ಸಮಸ್ಯೆಗಳಾಗುತ್ತಿರುವುದಾಗಿ ಸ್ಥಳೀಯ ನಿವಾಸಿಗಳು ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ನಮ್ಮ ನಿವಾಸಗಳಿಂದ ಕೇವಲ 100 ಮೀಟರ್ ಅಂತರದಲ್ಲಿ ಈ ಸಿಮೆಂಟ್ ಕಾಂಕ್ರೀಟ್ ಮಿಶ್ರಣ ಘಟಕ ಕಾರ್ಯಾರಂಭ ಮಾಡಿದ್ದು, ಈ ಬಗ್ಗೆ ಸ್ಥಳದಲ್ಲಿ ಯಾವುದೇ ನಾಮಫಲಕವಾಗಲೀ ಯೋಜನೆಗೆ ಸಂಬಂಧಪಟ್ಟ ವಿವರಗಳಾಗಲೀ ಅಳವಡಿಸಲಾಗಿಲ್ಲ. ಜನವಸತಿಗೆ ಅತ್ಯಂತ ಸಮೀಪದಲ್ಲಿಯೇ ಇಂತಹ ಮಾಲಿನ್ಯಕಾರಕ ಘಟಕದ ಸ್ಥಾಪನೆಗೆ ಅನುಮತಿ ನೀಡುವ ಮುನ್ನ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿರುವುದು ಘಟಕದ ಬಳಿಯೇ ವಾಸವಾಗಿರುವ ಇಲ್ಲಿನ ನಿವಾಸಿಗಳ ಗಮನಕ್ಕೇ ಬಂದಿರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಘಟಕದಿಂದ ಪರಿಸರಕ್ಕೆ ಬಿಡುಗಡೆಯಗುವ ಧೂಳು ಇನ್ನಿತರ ಪರಿಸರ ಹಾನಿಕಾರಕಗಳನ್ನು ನಿಯಂತ್ರಿಸುವ ಯಾವುದೇ ತಾಂತ್ರಿಕ ವ್ಯವಸ್ಥೆಯನ್ನು ಮಾಡದೆ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಉಲ್ಲಂಘಿಸಿದೆ. ಘಟಕ ಕಾರ್ಯಾರಂಭಿಸಿದಂದಿನಿಂದ ಪರಿಸರಕ್ಕೆ ಹೊರಬಿಡುವ ವಿಪರೀತ ಧೂಳಿನಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದ್ದು, ಸಿಮೆಂಟ್, ಜಲ್ಲಿ, ಮರಳುಗಳ ಧೂಳಿನ ಸೂಕ್ಷ್ಮ ಕಣಗಳು ಪರಿಸರಕ್ಕೆ ಯಾವುದೇ ಸುರಕ್ಷಾ ಕ್ರಮ ಅನುಸರಿಸದೆ ಬಿಡುತ್ತಿರುವುದರಿಂದ ಸ್ಥಳೀಯ ನಿವಾಸಿಗಳಿಗೆ ಅಲರ್ಜಿ, ಶ್ವಾಸಕೋಶದ ಸೋಂಕು ಮೊದಲಾದ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸಿವೆ. ಸಣ್ಣ ಮಕ್ಕಳು ಹಾಗೂ ಹಿರಿಯ ನಾಗರಿಕರು ಇನ್ನಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಮನೆಗಳ ಒಳಗೂ ಹೊರಗೂ ಸಿಮೆಂಟಿನ ಧೂಳು ತುಂಬುತ್ತಿದ್ದು, ದಿನಕ್ಕೆ ಹಲವು ಬಾರಿ ಮನೆ ಶುಚಿಗೊಳಿಸಬೇಕಾದ ಅನಿವಾರ್ಯತೆ ಇದೆ. ಘಟಕದಿಂದ ಹೊರಬರುವ ಧೂಳು ಬಾವಿ ಸಹಿತ ಇತರ ನೀರಿನ ಮೂಲಗಳನ್ನೂ ಸೇರಿಕೊಂಡು ಕಲುಷಿತ ನೀರು ಕುಡಿಯಬೇಕಾದ ದುಸ್ಥಿತಿ ಇದೆ. ಪರಿಸರವಾಸಿಗಳ ಅಡಿಕೆ ತೋಟಗಳಿಗೆ ಹಾಗೂ ತರಕಾರಿ ಬೆಳೆಗಳಿಗೂ ಹಾನಿಯಾಗುತ್ತಿವೆ ಎಂದು ಜಿಲ್ಲಾಧಿಕಾರಿಗೆ ನೀಡಿರುವ ಲಿಖಿತ ದೂರಿನಲ್ಲಿ ಆರೋಪಿಸಿರುವ ಸ್ಥಳೀಯ ನಿವಾಸಿಗಳು ಸಾರ್ವಜನಿಕವಾಗಿ ತೊಂದರೆ ಉಂಟಾಗುತ್ತಿರುವ ಜನವಸತಿ ಪ್ರದೇಶದಲ್ಲಿರುವ ಈ ಸಿಮೆಂಟ್ ಮಿಶ್ರಣ ಘಟಕದ ಬಗ್ಗೆ ಸೂಕ್ತ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಹಿರಿಯ ಪರಿಸರ ಅಧಿಕಾರಿಗೂ ಮನವಿ ಸಲ್ಲಿಸಿದ್ದಾರೆ.

See also  ಬಹ್ರೈಚ್: ಯುಪಿಯಲ್ಲಿ ಚಿರತೆ ದಾಳಿಗೆ 7 ವರ್ಷದ ಬಾಲಕ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು