News Kannada
Thursday, March 23 2023

ಮಂಗಳೂರು

ಉಜಿರೆ: ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Ujire: Free health check-up camp at Sri Dharmasthala Manjunatheshwara Multi-Speciality Hospital
Photo Credit : News Kannada

ಉಜಿರೆ: ಧಾರವಾಡದ ಮೆಡಿಕಲ್ ಕಾಲೇಜಿನಲ್ಲಿ ಎಲ್ಲಾ ಸೌಲಭ್ಯಗಳನ್ನೊಳಗೊಂಡ ಬೃಹತ್ ಆಸ್ಪತ್ರೆ ನಿರ್ಮಿಸುವ ಯೋಜನೆಗೆ ಈ ಎಪ್ರಿಲ್ ನಲ್ಲಿ ಚಾಲನೆ ದೊರೆಯಲಿದೆ. ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ಎರಡರಿಂದ ಮೂರು ಕೋಟಿ ರೂ. ಒದಗಿಸಲಾಗುತ್ತದೆ. ಸುರಕ್ಷಾ ಯೋಜನೆ ಮೂಲಕವೂ ಅನೇಕ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಂಗಳವಾರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

“ಆರೋಗ್ಯ ವಿಮೆ ಬಗ್ಗೆ ಯಾರು ಉದಾಸೀನ ತೋರಬಾರದು. ಆಪತ್ಕಾಲಕ್ಕೆ ಇದು ಸೂಕ್ತ ನೆರವು ನೀಡುತ್ತದೆ.ಇತ್ತೀಚಿನ ವರ್ಷಗಳಲ್ಲಿ ಸರಕಾರವು ಆರೋಗ್ಯ ವಿಚಾರದಲ್ಲಿ ಜನಸಾಮಾನ್ಯರಿಗೆ ಹೆಚ್ಚಿನ ಸಹಕಾರ ನೀಡುತ್ತಿದೆ.ಗ್ರಾಮೀಣ ಜನರು ಕಾಯಿಲೆ ಬಂದಾಗ ತಡವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವುದರಿಂದ ರೋಗ ಪತ್ತೆ ತಡವಾಗುತ್ತದೆ. ಇಂದಿನ ದಿನಗಳಲ್ಲಿ ಹೆಚ್ಚಿನ ಕಡೆ ತಜ್ಞ ವೈದ್ಯರು ಸುಸಜ್ಜಿತ ಆಸ್ಪತ್ರೆಗಳಿವೆ. ರೋಗಲಕ್ಷಣ ಕಂಡುಬಂದ ತಕ್ಷಣ ಆಸ್ಪತ್ರೆಗಳಿಗೆ ತೆರಳಿದರೆ ಕಡಿಮೆ ಖರ್ಚಿನ ಜತೆ ರೋಗಗಳು ಬೇಗನೆ ಶಮನಗೊಳ್ಳಲು ಸಾಧ್ಯ” ಎಂದು ಹೇಳಿದರು.

ಯೇನೆಪೋಯ ವೈದ್ಯಕೀಯ ಕಾಲೇಜಿನ ಉಪಕುಲಪತಿ ಡಾ. ವಿಜಯಕುಮಾರ್ ಮಾತನಾಡಿ “ಕ್ಯಾನ್ಸರ್ ನಂತಹ ರೋಗಗಳು ಮೊದಲ ಹಂತದಲ್ಲಿ ಪತ್ತೆಯಾದರೆ ಸಂಪೂರ್ಣ ಗುಣಪಡಿಸಲು ಸಾಧ್ಯ. ಆದರೆ ಹೆಚ್ಚಿನವರು ಕೊನೆ ಹಂತ ತಲುಪಿದ ಬಳಿಕ ನುರಿತ ವೈದ್ಯರನ್ನು ಸಂಪರ್ಕಿಸುವ ಕಾರಣ ಶೇ.12ರಷ್ಟು ರೋಗಿಗಳನ್ನು ಮಾತ್ರ ಗುಣಪಡಿಸಲು ಸಾಧ್ಯವಾಗುತ್ತದೆ. ಆದಾಯ ಮಿತಿಗೆ ಒಳಪಟ್ಟು ಕ್ಯಾನ್ಸರ್ ರೋಗಿಗಳಿಗೆ 2 ರಿಂದ 5 ಲಕ್ಷ ರೂ. ಸಹಾಯಧನ ಸರಕಾರದ ನಾನಾ ಯೋಜನೆಗಳಿಂದ ಸಿಗುತ್ತದೆ” ಎಂದು ಹೇಳಿದರು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಮಾತನಾಡಿ, ಉಜಿರೆಯ ಎಸ್ ಡಿ ಎಂ ಆಸ್ಪತ್ರೆ ನಗರಗಳಲ್ಲಿನ ಆಸ್ಪತ್ರೆಗಳಲ್ಲಿರುವ ಹೆಚ್ಚಿನ ಸೌಲಭ್ಯಗಳನ್ನು ಹೊಂದಿದ್ದು, ಪರಿಸರದ ಅನೇಕ ಮಂದಿಗೆ ಹೆಚ್ಚಿನ ಉಪಯೋಗ ನೀಡುತ್ತಿದೆ” ಎಂದರು.

ಎಸ್ ಡಿ ಎಂ ಆಸ್ಪತ್ರೆಯ ಮೆಡಿಕಲ್ ಸೂಪರಿಂಡೆಂಟ್ ಡಾ.ದೇವೇಂದ್ರ ಕುಮಾರ್, ವೈದ್ಯಾಧಿಕಾರಿ ಡಾ.ಸಾತ್ವಿಕ್ ಜೈನ್ ಉಪಸ್ಥಿತರಿದ್ದರು.

ಆಸ್ಪತ್ರೆಯ ಎಂ ಡಿ ಜನಾರ್ದನ ಎಂ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಮತ್ತು ಸಂವಹನಾಧಿಕಾರಿ ಹೇಮಾವತಿ ಹಾಗೂ ವಿಮಾ ವಿಭಾಗದ ಜಗನ್ನಾಥ ಕಾರ್ಯಕ್ರಮ ನಿರೂಪಿಸಿದರು.ಡಾ. ಉಷಾ ವಂದಿಸಿದರು. ಯೆನೆಪೋಯ ಹಾಗೂ ಉಜಿರೆ ಎಸ್ ಡಿ ಎಂ ಆಸ್ಪತ್ರೆಗಳ ಎಂ.ಒ.ಯು.ಒಡಂಬಡಿಕೆ ಒಪ್ಪಂದದ ಹಸ್ತಾಂತರ ಜರಗಿತು.

ಇಂದು ಕೂಡ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಧರ್ಮಸ್ಥಳ, ರೋಟರಿ ಕ್ಲಬ್ ಆಪ್ ಮಂಗಳೂರು, ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ನಡೆಯುತ್ತಿರುವ ಆರೋಗ್ಯ ಶಿಬಿರ ಇಂದು ಕೂಡ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರ ತನಕ ನಡೆಯಲಿದೆ. ಶಿಬಿರವು ಸಾಮಾನ್ಯ ಆರೋಗ್ಯ ತಪಾಸಣೆ, ಸ್ತ್ರೀರೋಗ ತಪಾಸಣೆ, ಮ್ಯಾಮೊಗ್ರಫಿ, ಪಾಪ್ ಪರೀಕ್ಷೆ,ಲ್ಯಾಬ್ ಪರೀಕ್ಷೆ, ಆರೋಗ್ಯ ಮೌಲ್ಯಮಾಪನ, ಉಚಿತ ಸಾಮಾನ್ಯ ಔಷಧಿ ವಿತರಣೆ ಮೊದಲಾದ ಸೌಲಭ್ಯಗಳನ್ನು ಒದಗಿಸಲಿದೆ.

See also  ಮಂಗಳೂರು: ಹಿಜಾಬ್​ಗಾಗಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು