News Kannada
Friday, March 24 2023

ಮಂಗಳೂರು

“ಉಡುಪಿ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜರು”: ವಿವಾದ ಸೃಷ್ಟಿಸಿದ ಮಿಥುನ್‌ ರೈ ಹೇಳಿಕೆ

'Muslim kings gave land to Udupi Mutt' controversy, social media debate
Photo Credit : Twitter

ಮೂಡುಬಿದಿರೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಮಿಥುನ್ ರೈ ಅವರು ಮೂಡುಬಿದಿರೆ ಮಸೀದಿಯೊಂದರ ಸಮಾರಂಭದಲ್ಲಿ `ಉಡುಪಿ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜರು’ ಎಂಬ ಹೇಳಿಕೆಯು ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಫೆ.26ರಂದು ಮೂಡುಬಿದಿರೆ ತಾಲೂಕಿನ ಪುತ್ತಿಗೆ ನೂರಾನಿ ಮಸೀದಿಯ ನವೀಕೃತ ಮಸೀದಿಯಲ್ಲಿ `ನಮ್ಮೂರ ಮಸೀದಿ ನೋಡ ಬನ್ನಿ’ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮಿಥುನ್ ರೈ ಸೌಹಾರ್ದತೆಯ ವಿಚಾರದಲ್ಲಿ ಮಾತನಾಡುವಾಗ, ಈ ಜಿಲ್ಲೆ ಸೌಹಾರ್ದತೆಯ ಇತಿಹಾಸ ಹೊಂದಿರುವ ಜಿಲ್ಲೆ, ಬಪ್ಪನಾಡು ದೇವಿ ಒಲಿದದ್ದು ಬಪ್ಪ ಬ್ಯಾರಿಗೆ, ಕವತಾರಿನಲ್ಲಿನ ಕೊರಗಜ್ಜನ ಕಟ್ಟೆಗೆ ಅರ್ಚಕ ಮುಸ್ಲಿಂ ಸಮುದಾಯದವರು.ಉಡುಪಿ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜರು. ಅತ್ತೂರು ಚರ್ಚ್, ಸುಬ್ರಹ್ಮಣ್ಯ ದೇವಸ್ಥಾನ, ಉಳ್ಳಾಲ ದರ್ಗದಲ್ಲಿ ಸರ್ವಧರ್ಮದವರು ಪ್ರಾರ್ಥನೆ ಸಲ್ಲಿಸುತ್ತಾರೆ ಎಂದಿದ್ದಾರೆ. ಇದರ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ.

ಮಠ ಕಟ್ಟಲು ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು’ ಎನ್ನುವ ಪೇಜಾವರ ಸ್ವಾಮೀಜಿಯವರು ಹಿಂದೆ ನೀಡಿದ ಹೇಳಿಕೆಯ ಪತ್ರಿಕೆಯ ವರದಿಯೊಂದರ ತುಣುಕು ಕೂಡ ಮಿಥುನ್ ರೈ ಅವರನ್ನು ಸಮರ್ಥಿಸಿಕೊಂಡು ಇದರೊಂದಿಗೆ ವೈರಲ್ ಆಗುತ್ತಿದೆ.

See also  ಮಂಗಳೂರು: ಸಿನಿಮೀಯಾ ರೀತಿಯಲ್ಲಿ ಕಳ್ಳನನ್ನು ಅಟ್ಟಾಡಿಸಿ ಹಿಡಿದ ಪೋಲಿಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು