News Kannada
Saturday, March 25 2023

ಮಂಗಳೂರು

ಮಂಗಳೂರು: ಫಲ್ಗುಣಿ ನದಿಗೆ ಹಾರಿ ಯುವಕ ಆತ್ಮಹತ್ಯೆ

Youth commits suicide by jumping into Phalguni river
Photo Credit : News Kannada

ಮಂಗಳೂರು: ಕಾಜಿಲ ನಿವಾಸಿ ದೇಜು ಪೂಜಾರಿ ಎಂಬುವರ ಪುತ್ರ ಪವನ್ ಪೂಜಾರಿ(23) ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಆತ ಸೋಮವಾರ ರಾತ್ರಿ ತನ್ನ ಅಜ್ಜಿ ಭೋಜ ಪೂಜಾರಿಯವರನ್ನು ಕಾಣಲು ಮಂಗಳೂರಿನ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದು, ಬಳಿಕ ನಾಪತ್ತೆಯಾಗಿದ್ದ. ನಂತರ ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಪವನ್‌ನ ಸ್ನೇಹಿತನ ತಂದೆ ಗುರುವಾರ ಪವನ್ ತಾಯಿಗೆ ಕರೆ ಮಾಡಿ, ಪವನ್ ತನ್ನ ಬ್ಯಾಗನ್ನು ನಮ್ಮ ಮನೆಯ ಕಾಂಪೌಂಡಿನ ಮೇಲೆ ಇಟ್ಟು ಹೋಗಿದ್ದಾನೆ ಎಂದಿದ್ದಾರೆ.

ಪವನ್ ನಾಪತ್ತೆ ಬಗ್ಗೆ ಆತನ ಬಾವ ವಿನೋದ್ ಎಂಬುವರು ಬಜೈ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯವರು ಪವನ್‌ಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ, ಗುರುಪುರ ಫಲ್ಗುಣಿ ನದಿಯಲ್ಲಿ ಸೇತುವೆಗೆ ಹತ್ತಿರದಲ್ಲಿ ತೇಲುತ್ತಿದ್ದ ಶವವೊಂದು ಪತ್ತೆಯಾಗಿದೆ. ಬಳಿಕ ಪೊಲೀಸರು ಸ್ಥಳೀಯರ ಸಹಾಯದಿಂದ ಶವ ಮೇಲೆತ್ತಿ ಮಹಜರು ನಡೆಸಿ ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಪವನ್ ಆತ್ಮಹತ್ಯೆಗೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

See also  ಬೆಳ್ತಂಗಡಿ: ಕುಸಿದು ಬಿದ್ದು ವ್ಯಕ್ತಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು