News Kannada
Monday, March 20 2023

ಮಂಗಳೂರು

ಬಂಟ್ವಾಳ:  ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಂದ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ

The Congress party cannot be defeated by development works in the state.
Photo Credit : News Kannada

ಬಂಟ್ವಾಳ: ರಾಜ್ಯದಲ್ಲಿ ಕಾಂಗ್ರೆಸ್ ಮಾಡಿದ ಅಭಿವೃದ್ಧಿ ಕಾರ್ಯಗಳಿಂದ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಹಿಂದೆ ನಡೆದ ಕೊಲೆಗಳನ್ನು ಕಾಂಗ್ರೆಸ್ ಮೇಲೆ ಹೊರಿಸಿ ಭಾವನಾತ್ಮಕವಾಗಿ ಜನರನ್ನು ಮರುಳು ಮಾಡಿದ್ದು, ಆದರೆ ಈ ಬಾರಿ ಅವರ ಮಾತುಗಳಿಗೆ ಮಾರು ಹೋಗದೆ ತಕ್ಕ ಉತ್ತರ ನೀಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

ಅವರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯಲ್ಲಿ ಕರಿಯಂಗಳ, ಬಡಗಬೆಳ್ಳೂರು, ಅಮ್ಮುಂಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಯಾತ್ರೆ ಸಾಗಿದ ಬಳಿಕ ಬಡಕಬೈಲು ಜಂಕ್ಷನ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಈಗಾಗಲೇ ನೀಡಿರುವ ಗ್ಯಾರಂಟಿ ಭರವಸೆಗಳಲ್ಲಿ‌ ಒಂದೊಂದು ಕುಟುಂಬಗಳಿಗೆ ಲಕ್ಷಾಂತರ ರೂ.ಲಾಭವಾಗಲಿದ್ದು, ಜತೆಗೆ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ತಂದಿದ್ದೇವೆ. ಅದರ ಮೂಲಕ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ, ನಾರಾಯಣ ಗುರು ನಿಗಮ, ಬಂಟ ಅಭಿವೃದ್ಧಿ ನಿಗಮ, ಅತಿ ಹಿಂದುಳಿದ ವರ್ಗಗಳ ನಿಗಮ ಮಾಡಿ ತಲಾ ೨೫೦ ಕೋ.ರೂ.ಗಳ ಅನುದಾನ ನೀಡಲಿದ್ದೇವೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ನಾವು ನೀಡಿದ ೫ ಸಾವಿರ ಕೋ.ರೂ.ಗಳಿಗೆ ಸಾಕ್ಷಿ ಕೇಳುತ್ತಿರುವ ಬಿಜೆಪಿಯವರ ಅವರ ೨ ಸಾವಿರ ಕೋ.ರೂ.ಗಳಿಗೆ ಸಾಕ್ಷಿ ತೋರಿಸಲಿ. ನನ್ನ ವಿರುದ್ಧ ಮಾಡಿರುವ ಎಲ್ಲಾ ಅಪಪ್ರಚಾರಗಳಿಗೆ ತಕ್ಕ ಪಾಠ ಕಲಿಸುವಂತೆ ತಾನು ದೇವರ ಬಳಿ ಪ್ರಾರ್ಥನೆ ಮಾಡಿದ್ದೇನೆ. ನಾನು ೧೩ ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದು, ಮನಸ್ಸು ಮಾಡಿದ್ದರೆ ಎಲ್ಲಿಗೋ ತಲುಪಬಹುದಿತ್ತು. ಆದರೆ ನಾನು ಪ್ರಾಮಾಣಿಕತೆ ಬಿಟ್ಟು ಕೆಲಸ ಮಾಡಿಲ್ಲ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ನೀವು ನೀಡಿರುವ ಸಹಕಾರ ಎಂದೂ ಮರೆಯಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಎಂ.ಎಸ್.ಮಹಮ್ಮದ್, ಪದ್ಮಶೇಖರ್ ಜೈನ್, ಅಬ್ಬಾಸ್ ಆಲಿ, ಪಿಯೂಸ್ ರಾಡ್ರಿಗಸ್, ಸುಭಾಶ್ಚಂದ್ರ ಶೆಟ್ಟಿ, ಅಪ್ಪಿ, ಜಯಂತಿ ಪೂಜಾರಿ ಮೊದಲಾದವರಿದ್ದರು.

ಎಡ್ತೂರು ರಾಜೀವ ಶೆಟ್ಟಿ ಅವರು ಹಿಂದೆ ರಮಾನಾಥ ರೈ ಅವರು ಸಚಿವರಾಗಿದ್ದ ವೇಳೆ ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು ಗ್ರಾ.ಪಂ.ಗಳಿಗೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

See also  ಉತ್ತರ ಕರ್ನಾಟಕದ ಸಿಹಿತಿನಿಸು ಕರದಂಟು 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು