News Kannada
Thursday, March 23 2023

ಮಂಗಳೂರು

ಬಂಟ್ವಾಳ: ಕಾಂಗ್ರೆಸ್ ಗ್ಯಾರಂಟಿ ಎಂಬುದು ಗಾದೆ ಮಾತಿನಂತಿದೆ – ರಾಜೇಶ್ ನಾಯ್ಕ್

Congress guarantee is like a proverb: Rajesh Naik
Photo Credit : News Kannada

ಬಂಟ್ವಾಳ: ಜನರನ್ನು ಮೋಸ ಮಾಡುವ, ಜನರನ್ನು ಗೊಂದಲಕ್ಕೆ ಸಿಲುಕಿಸುವ ಹೇಳಿಕೆಗಳನ್ನು ನೀಡುವ ಕೆಲಸ ಕಾಂಗ್ರೇಸ್ ಪಕ್ಷ ದಿಂದ ನಡೆಯುತ್ತಿದೆ, ಇಂತಹ ಸುಳ್ಳಿನ ಮಾತಿಗೆ ಜನ ಮರುಳಾಗದೆ ಅಭಿವೃದ್ಧಿ ಮತ್ತು ರಾಷ್ಟ್ರೀಯತೆಗೆ ಒತ್ತು ನೀಡಿ ಆಡಳಿತ ನಡೆಸುವ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಜತೆಯಾಗಿ ಕೆಲಸ ಮಾಡಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಅಮ್ಮುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 8 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದ ಬಳಿಕ ಬೆಂಜನಪದವಿನಲ್ಲಿ ಶ್ರೀ ಪೊಳಲಿ ರಿಕ್ಷಾ ಭವನವನ್ನು ಉದ್ಘಾಟಿಸಿ, ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಕಾಂಗ್ರೆಸ್ ಗ್ಯಾರಂಟಿ ಎಂಬುದು ಗಾದೆ ಮಾತಿನಂತಿದೆ ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಕಂಡು ಸಹಿಸಲಾರದೆ ಗೊಂದಲಕ್ಕೆ ಸಿಲುಕಿರುವ ಕಾಂಗ್ರೆಸ್ ಪಕ್ಷ ಸುಳ್ಳಿನ ಹೇಳಿಕೆಗಳನ್ನು ನೀಡುತ್ತಿದೆ ಎಂದು ಹೇಳಿದರು. ಹಲವು ಕಾಲದ ಬೇಡಿಕೆಯಾದ ರಿಕ್ಷಾ ನಿಲ್ದಾಣವನ್ನು ಆದ್ಯತೆಯ ನೆಲೆಯಲ್ಲಿ ಒದಗಿಸುವ ಕೆಲಸ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಇದರ ನಿರ್ವಹಣೆ ಮತ್ತು ಸ್ವಚ್ಚತೆಯನ್ನು ಕಾಯ್ದುಕೊಂಡು ಜನರ ಸೇವೆ ಮಾಡಿ ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಭಾರತೀಯ ಮಜ್ದೂರು ಸಂಘದ ನಿಕಟಪೂರ್ವರಾಜ್ಯಾಧ್ಯಕ್ಷ ವಿಶ್ವನಾಥ ಶೆಟ್ಟಿ, ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಧರ್ಮದರ್ಶಿ ರಮೇಶ್ ಬಿ‌. ಬೆಂಜನಪದವು ಕೊರಗತನಿಯಜ್ಜ ಕಟ್ಟೆಯ ಧರ್ಮದರ್ಶಿ ವಿಜಯ, ಭಾರತೀಯ ಮಜ್ದೂರು ಸಂಘದ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ‌ಮಣಿಹಳ್ಳ, ಉಪಾಧ್ಯಕ್ಷ ನಾರಾಯಣ ಪೂಜಾರಿ, ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್, ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷೆ ಯಶೋಧ ಜಾರಂದಗುಡ್ಡೆ, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಆಚಾರ್ಯ, ಉಪಾಧ್ಯಕ್ಷೆ ಪ್ರಮೀಳಾ,ಬಡಗಬೆಳ್ಳೂರು ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಆಳ್ವ, ಅಮ್ಮುಂಜೆ ಗ್ರಾಮಪಂಚಾಯತ್ ಸದಸ್ಯರಾದ ರಾಧಕೃಷ್ಣ ತಂತ್ರಿ, ಕಾರ್ತಿಕ್ ಬಳ್ಳಾಲ್, ಲಕ್ಮೀ, ಬಾಗೀರಥಿ, ರವೀಂದ್ರ ಸುವರ್ಣ, ರೋನಾಲ್ಡ್ ಡಿ.ಸೋಜ, ಕಲ್ಪನೆ ರಿಕ್ಷಾ ಚಾಲಕರ ಸಂಘದ ಗೌರವಾಧ್ಯಕ್ಷ ಕಮಲಾಕ್ಷ ಪೂಜಾರಿ, ಕಲ್ಪನೆ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಉದಯಕುಮಾರ್, ಪ್ರಮುಖರಾದ ಸಂದೀಪ್ ಬೆಂಜನಪದವು, ಜನಾರ್ದನ ಬಾರಿಂಜೆ,ಸುರೇಶ್ ಬೆಂಜನಪದವು, ರಾಮಚಂದ್ರ ಆಚಾರ್ಯ ಬೆಂಜನಪದವು ಮತ್ತಿತರರು ಉಪಸ್ಥಿತರಿದ್ದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಅಮ್ಟಾಡಿ ಡಾ| ಕೃಷ್ಣ ಮೂರ್ತಿ, ರಿಕ್ಷಾ ಚಾಲಕ ಗುರುವಪ್ಪ ಅವರನ್ನು ಇದೇ ಸಂದರ್ಭ ಗೌರವಿಸಲಾಯಿತು.

See also  ಮಂಗಳೂರು:ಡಿ.26 ರಿಂದ 28ರ ವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು