News Kannada
Wednesday, May 31 2023
ಮಂಗಳೂರು

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ- ರಾಜೇಶ್ ನಾಯ್ಕ್

Bantwal: Bharatiya Janata Party will come back to power: Rajesh Naik
Photo Credit : News Kannada

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ, ಮುಂದಿನ ಅವಧಿಯಲ್ಲೂ ಜನತೆಯ ಪ್ರತಿಯೊಂದು ಕೆಲಸಗಳನ್ನು ಮಾಡಲು ಶಕ್ತವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ ಮಂಡಲದ ಪೇಜ್ ಪ್ರಮುಖರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕುವರೆ ವರ್ಷಗಳಲ್ಲಿ 2 ಸಾವಿರ ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಮಾಡಿದ್ದು,ಎಲ್ಲವೂ ಪಾರದರ್ಶಕವಾಗಿದೆ ಎಂದ ಅವರು ದಿನಕ್ಕೆ ಒಂದರಂತೆ 1504 ರಸ್ತೆಗಳನ್ನು ಮಾಡಲಾಗಿದೆ.

ಕೋವಿಡ್ ನ ಬಳಿಕ ದೇಶದ ಆರ್ಥಿಕ ವ್ಯವಸ್ಥೆ
ಕೋವಿಡ್ ಬಳಿಕ ಬಂಟ್ವಾಳದ ಎಲ್ಲಾ ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಲಾಗಿದ್ದು, ಪ್ರಥಮವಾಗಿ ಬಂಟ್ವಾಳದಲ್ಲಿ ಐಸಿಯು ಘಟಕ ನಿರ್ಮಾಣ ಮಾಡಲಾಗಿದೆ. ವಿದ್ಯೆ ಮತ್ತು ಆರೋಗ್ಯ ರಕ್ಷಣೆ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದ್ದು, ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕ್ಷೇತ್ರದಲ್ಲಿ ಒಟ್ಟು 48 ಕೋಟಿಗೂ ಮಿಕ್ಕಿದ ಹಣ ವಿವಿಧ ಯೋಜನೆ ಯಲ್ಲಿ ಕೃಷಿಕರ ಅಕೌಂಟ್ ಗೆ ಬಿದ್ದಿದೆ. ಚುನಾವಣೆಯ ಪೂರ್ವತಯಾರಿಯ ಹಿನ್ನೆಲೆಯಲ್ಲಿ ಪೇಜ್ ಪ್ರಮುಖರಿಗೆ ಜವಬ್ದಾರಿಯ ಬಗ್ಗೆ ಮಾಹಿತಿ ನೀಡಲು ಈ ಸಭೆಯನ್ನು ಆಯೋಜಿಸಲಾಗಿದ್ದು, ನಮ್ಮ ‌ನಮ್ಮ ಬೂತ್ ನ ಬಗ್ಗೆ ಮತದಾರರ ಬಗ್ಗೆ ಚಿಂತಿಸಿ ಬಿಜೆಪಿ ಪರವಾಗಿ ಮತದಾನ ಮಾಡುವಂತೆ ಮಾಡಿದರೆ , ಬಿಜೆಪಿ ಗೆಲುವು ಸಾಧಿಸುದು ಗ್ಯಾರಂಟಿ ಎಂದು ಅವರು ಭರವಸೆ ನೀಡಿದರು.

ದೇವಪ್ಪ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ರವಿಚಂದ್ರ ಮಿಜಾರ್, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ರಾಜ್ಯ ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ನಿಗಮದ ನಿರ್ದೇಶಕಿ ಸುಲೋಚನ ಜಿ.ಕೆ‌.ಭಟ್ ಉಪಸ್ಥಿತರಿದ್ದರು.
ಮಂಡಲದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು.

ಮಂಡಲದ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.

See also  ಬಿಹಾರ: 22 ವರ್ಷಗಳಲ್ಲಿ 8ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ನಿತೀಶ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು