News Kannada
Tuesday, May 30 2023
ಮಂಗಳೂರು

ಬಂಟ್ವಾಳ: ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ, ಶಾಸಕ ರಾಜೇಶ್‌ ನಾಯ್ಕ್ ಹೇಳಿಕೆ

I have the satisfaction of being transformed into a peaceful Bantwal
Photo Credit : News Kannada

ಬಂಟ್ವಾಳ: ಕಳೆದ ನಾಲ್ಕೂವರೆ ವರ್ಷಗಳಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರವನ್ನು ಶಾಂತಿಯುತ ಬಂಟ್ವಾಳವಾಗಿ ಪರಿವರ್ತಿಸಿರುವ ತೃಪ್ತಿ ‌ನನಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಅವರು ಕರೋಪಾಡಿ ಗ್ರಾ.ಪಂ‌.ನ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೇರವೇರಿಸಿ ,ಸುಮಾರು 80 ಲಕ್ಷದ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ಕರೋಪಾಡಿ ಗ್ರಾಮದಲ್ಲಿ 13 ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಅನುದಾನಗಳ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ನಮ್ಮ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಯೋಜನೆಗಳ ಪ್ರತಿಯೊಂದು ಸಹಿತ ದಾಖಲೆ ನಮ್ಮಲ್ಲಿದೆ, ಪೈಸೆಪೈಸೆಗೂ ಲೆಕ್ಕವಿದೆ. ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಮತದಾರರಲ್ಲಿ, ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯ ಕೆಲವರಿಂದ ನಡೆಯುತ್ತಿದ್ದು, ಈ ಕುರಿತು ಎಚ್ಚರ ವಹಿಸುವಂತೆ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಿಂದ ಇಡೀ ಜಗತ್ತು ದೇಶದತ್ತ ನೋಡುತ್ತಿದೆ . ಇತ್ತೀಚಿಗೆ ನಡೆದ ಸರ್ವೇಯಲ್ಲೂ ಪ್ರಧಾನಿ ಮೋದಿಯವರು ನಂ.1 ಸ್ಥಾನದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಜನಪರವಾದ ಯೋಜನೆಗಳನ್ನು ‌ಜಾರಿಗೆ ತರಲಾಗಿದೆ. ಕಾರ್ಯಕರ್ತರು ಇದನ್ನು ಮನೆಮನೆಗೆ ತೆರಲಿ ಮನವರಿಕೆ ಮಾಡುವ ಮೂಲಕ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಂತೆ ಅವರು ಕರೆ ನೀಡಿದರು.

ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಕರೋಪಾಡಿ ಶಕ್ತಿಕೇಂದ್ರದ ಪ್ರಮುಖ್ ಅನೆಯಾಲಕೋಡಿ ವಿಘ್ನೇಶ್ವರ ಭಟ್, ಕ್ಷೇತ್ರದ ಎಸ್.ಟಿ.ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್ ಉಕ್ಕಿನಾರು, ಪಂಚಾಯಿತಿ ಸದಸ್ಯರಾದ ಪಟ್ಲಗುತ್ತು ರಘುನಾಥ ಶೆಟ್ಟಿ, ಅನೆಯಾಲಮಂಟಮೆ ಅಶ್ವತ್ಥ್ ಶೆಟ್ಟಿ, ಶಶಾಂಕ್ ಪದ್ಯಾಣ, ಪ್ರಸನ್ನ ಪದ್ಯಾಣ, ಜಯರಾಮ ನಾಯಕ್ ಮಿತ್ತನಡ್ಕ, ತಾಪಂ ಮಾಜಿ ಸದಸ್ಯ‌ ರಘುರಾಮ ಶೆಟ್ಟಿ, ಯುವಮೋರ್ಚಾ ಪ್ರಮುಖರಾದ ವಿನೋದ್ ಶೆಟ್ಟಿ, ಕರೋಪಾಡಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶ್ರೀಲತಾ ಶೆಟ್ಟಿ ಪಟ್ಲ ಉಪಸ್ಥಿತರಿದ್ದರು.

See also  ಮಂಗಳೂರು: ಸ್ಕೂಟಿಗೆ ಕಾರ್ ಡಿಕ್ಕಿ ಹೊಡೆದು ಅಣ್ಣ, ತಂಗಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು