News Kannada
Sunday, April 02 2023

ಮಂಗಳೂರು

ಬಂಟ್ವಾಳ: ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ 2 ಕಿ.ಮೀ.ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಷೇಧ

Bantwal: Illegal mining has been banned in a 2-km radius around Karinjeswara Sannidhi.
Photo Credit : News Kannada

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ 2 ಕಿ.ಮೀ.ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯನ್ನು ನಿಷೇಧಿಸಿ ಸರಕಾರ ಅದೇಶ ಹೊರಡಿಸಿದೆ.

ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪವಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು. ಅದರೆ ಇದೀಗ ಸರಕಾರ ಗಣಿಗಾರಿಕೆ ಗೆ ನಿಷೇಧದ ಅದೇಶ ಮಾಡಿದೆ.

ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 8(3) ರಲ್ಲಿ ಪ್ರದವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲೆ, ಬಂಟ್ವಾಳ ತಾಲೂಕು, ಕಾವಳಮುರು ಗ್ರಾಮದ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ 02 ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯಿರಿಸಿ, ಸದರಿ ಸ್ಥಳದ 02 ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿದೆ ಎಂಬ ಆದೇಶ ಹೊರಡಿಸಿದೆ.

ಹಿಂದೂ ಜಾಗರಣ ವೇದಿಕೆಯ ಹೋರಾಟಕ್ಕೆ ಶಾಸಕರ ಸಾಥ್

ಅಕ್ರಮ ಗಣಿಗಾರಿಕೆಯ ವಿರುದ್ದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು. ಗಣಿಗಾರಿಕೆ ಯನ್ನು ನಿಲ್ಲಿಸಲು ಪ್ರತಿಭಟನೆ , ಸಹಿತ ಅನೇಕ,ಹೋರಾಟಗಳು ನಡೆದ ಪರಿಣಾಮ ಹಾಗೂ ಇವರ ಹೋರಾಟದ ಜೊತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನೀಡಿದ ಬೆಂಬಲದಿಂದ ಗಣಿಗಾರಿಕೆ ಬಂದ್ ಆಗಿದೆ.

ಈ ಬಗ್ಗೆ ಹಿಂದೂ ಜಾಗರಣಾ ವೇದಿಕೆಯವರ ಹೋರಾಟದ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರಿಗೆ ಗಣಿಗಾರಿಕೆಯನ್ನು ನಿಲ್ಲಿಸುವ ಅದೇಶ ಮಾಡುವಂತೆ ಮನವಿ ಮಾಡಿದ್ದರು. ಇದೀಗ ಸರಕಾರದ ಅದೇಶ ಹೊರಡಿಸಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.

See also  ಶಿವಮೊಗ್ಗ: ಗೋಪಾಳದ ನ್ಯೂಮಂಡ್ಲಿ ಬೈಪಾಸ್ ನಲ್ಲಿರುವ ಅಲ್ ತಾಜ್ ಪೆಟ್ರೋಲ್ ಬಂಕ್ ನಲ್ಲಿ ಗಲಾಟೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು