News Kannada
Saturday, April 01 2023

ಮಂಗಳೂರು

ಮಂಗಳೂರು: ಮತ್ತೊಂದು “ಪಂಪ್‌ವೆಲ್ʼ” ಆಗಲಿದೆಯೇ ಕೂಳೂರು ಬ್ರಿಡ್ಜ್

Will The Kuloor Bridge Be Another Past Pumpwell Bridge
Photo Credit : News Kannada

ಮಂಗಳೂರು: ನಗರ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಕೂಳೂರು ಸೇತುವೆಗೆ ಚಾಲನೆ ನೀಡಿ ಮೂರು ವರ್ಷ ಕಳೆದರೂ ಯಾವುದೇ ಪ್ರಗತಿ ಕಾಣದೆ ನೆನೆಗುದಿಗೆ ಬಿದ್ದಿದೆ. ಈ ಮಧ್ಯೆ ಹೆದ್ದಾರಿ ಪ್ರಾಧಿಕಾರ 4 ವರ್ಷಗಳ ಹಿಂದೆಯೇ ಹಳೇ ಸೇತುವೆ ಅಸಮರ್ಥ ಎಂದು ವರದಿ ನೀಡಿದರೂ ಇನ್ನೂ ಅದೇ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸವಾರರನ್ನು ಅಪಾಯಕ್ಕೆ ತಳ್ಳಿದ್ದಾರೆ.

4 ವರ್ಷಗಳ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ಸರ್ವೇ ಕಾರ್ಯ ಮಾಡುವ ವೇಳೆ ಕೂಳೂರು ಸೇತುವೆ ಸಂಚಾರಕ್ಕೆ ಯೋಗ್ಯವಲ್ಲ ಎಂದು ವರದಿ ನೀಡಿತ್ತು. ಇದೇ ವರದಿಯನ್ನು ಅಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಳುಹಿಸಿ ಕೊಟ್ಟಿತ್ತು. ಆಗ ಒಂದೇ ಸೇತುವೆ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಆ ಆದೇಶವನ್ನು ಹಿಂಪಡೆಯಲಾಯಿತು. ಇದಾದ ಕೆಲವೇ ತಿಂಗಳಲ್ಲಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನೂತನ ಸೇತುವೆಗೆ ಶಿಲನ್ಯಾಸ ನೀಡಿದ್ದರು. ಆದರೆ ಮೊದಲು ಭರದಿಂದ ಸಾಗಿದ ಕಾಮಗಾರಿ ಕ್ರಮೇಣ ನಿಂತು ಹೋಗಿ ಇಂದು ಮೂರು ವರ್ಷಗಳಾದರೂ ಪ್ರಗತಿ ಕಾಣದೇ ನೆನೆಗುದಿಗೆ ಬಿದ್ದಿದೆ.

ಇನ್ನೇನು ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಲ್ಲಿ ಸಿಪಿಐಎಂ ಪಂಜಿಮೊಗರು ವಲಯ ಸಮಿತಿ ಕೂಳೂರು ಸೇತುವೆ ಬಳಿ ಪ್ರತಿಭಟನೆಯನ್ನು ಕೂಡಾ ನಡೆಸಿದೆ.

ಕೂಳೂರು ಸೇತುವೆ ಕಾಮಗಾರಿ ಬಗ್ಗೆ ಸ್ಥಳೀಯ ಶಾಸಕ ಭರತ್ ಶೆಟ್ಟಿಗಾಗಲಿ, ಸಂಸದರಿಗಾಗಲೀ ಆಸಕ್ತಿ ಇಲ್ಲದಾಗಿದೆ. ಕಾಮಗಾರಿಯ ಕಮಿಷನ್ ವಿಚಾರವಾಗಿ ಕಾಮಗಾರಿ ನಿಂತಿರಬಹುದೇ ಎಂದು ಸಾರ್ವಜನಿಕ ವಲಯದಲ್ಲಿ ಸುದ್ದಿ ಇದೆ. ಕೋಟಿ ಕೋಟಿ ಕಾಮಗಾರಿ ಬಗ್ಗೆ ಬ್ಯಾನರ್ ಹಾಕುವ ಶಾಸಕರ ಕಾಮಗಾರಿ ಎಲ್ಲಿ ನಡೆಯುತ್ತಿದೆ ಎಂದು ತಿಳಿಯುತ್ತಿಲ್ಲ. ಅಪಾಯದ ಅಂಚಿನಲ್ಲಿರುವ ಕೂಳೂರು ಸೇತುವೆ ನಿರ್ಮಾಣಕ್ಕೆ ಇವರಿಗೆ ಆಸಕ್ತಿ ಇಲ್ಲದಿರುವುದು ವಿಪರ್ಯಾಸ ಎಂದು ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಗುತ್ತಿಗೆದಾರರ ಜತೆಗಿನ ವಿವಾದದ ಕಾರಣದಿಂದಾಗಿ ಕಾಮಗಾರಿ ಸ್ಥಗಿತವಾಗಿದೆ. ಎರಡು ಸೇತುವೆಗಳ ಮಧ್ಯೆ 6 ಪಥದ ಸೇತುವೆ ನಿರ್ಮಾಣ ಎಂದು ಪೂರ್ಣವಾಗುವುದೋ ಗೊತ್ತಿಲ್ಲ. 57 ಕೋಟಿ ರೂಪಾಯಿ ವೆಚ್ಚದ ಯೋಜನೆ ಈಗ 70 ಕೋಟಿ ರೂ.ಗೆ ತಲುಪಿದೆ. 18 ತಿಂಗಳಲ್ಲಿ ಪೂರ್ಣ ಗೊಳಿಸುವ ಗುರಿ ಹೊಂದಲಾಗಿತ್ತು. ಹೆದ್ದಾರಿ ಸಚಿವ ನಿತಿನ್ ಗಡ್ಕರಿ 2020ರಲ್ಲಿ ಇದಕ್ಕೆ ಶಿಲಾನ್ಯಾಸವನ್ನೂ ಮಾಡಿ, 2021 ರಲ್ಲಿ ಕೆಲಸ ಆರಂಭವಾಗಿತ್ತು. 2020 ರಲ್ಲಿ ಸೇತುವೆಯನ್ನು ಮುಚ್ಚಿ ದುರಸ್ತಿ ಮಾಡಲಾಗಿತ್ತು. ಆದರೂ ಹೊಸ ಸೇತುವೆ ಕಾಮಗಾರಿ ಆಗಿಲ್ಲ. ಸ್ಥಳೀಯ ಜನತೆ ದೊಡ್ಡ ಮಟ್ಟದ ಹೋರಾಟಕ್ಕೆ ವೇದಿಕೆಯನ್ನು ಸಜ್ಜುಗೊಳಿಸುತ್ತಿದ್ದಾರೆ. ಅದಕ್ಕೂ ಮುನ್ನ ಶಾಸಕ ಭರತ್ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲು ಎಚ್ಚೆತ್ತುಕೊಳ್ಳುವುದು ಒಳಿತು.

See also  ಗ್ರಾಮೀಣ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡಲು ಸೂಚನೆ: ಹರೀಶ್ ಪೂಂಜ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು