News Kannada
Friday, March 31 2023

ಮಂಗಳೂರು

ಬೆಳ್ತಂಗಡಿ: ಗುಳಿಗ ದೈವಕ್ಕೆ ಅಪಮಾನ, ಅರಗ ಜ್ಞಾನೇಂದ್ರ ದೈವ ಸನ್ನಿಧಿಯಲ್ಲಿ ಕ್ಷಮೆ ಯಾಚಿಸಬೇಕು

Insult to Guliga deity, Araga Jnanendra should apologise in the presence of the deity
Photo Credit : News Kannada

ಬೆಳ್ತಂಗಡಿ: ತ್ರೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಗೃಹ ಮಂತ್ರಿ ಅರಗ ಜ್ಞಾನೇಂದ್ರ ತುಳುನಾಡಿನ ಆರಾಧನೆಯ ಗುಳಿಗ ದೈವಕ್ಕೆ ಜಪಾನ್ ಗುಳಿಗೆ ಎಂದು ಹೇಳಿ ಅವಮಾನ ಮಾಡಿದ್ದಾರೆ. ಇವರು ಗುಳಿಗ ದೈವದ ಸನ್ನಿಧಿಯಲ್ಲಿ ಬಂದು ಕ್ಷಮೆ ಯಾಚಿಸ ಬೇಕು ಎಂದು ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಪ್ರಭಾಕರ ಶಾಂತಿಕೋಡಿ ಹೇಳಿದರು. ಅವರು ಮಾ.17 ರಂದು ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ತುಳುನಾಡಿನ ದೈವದ ಹೆಸರು ಹೇಳುವ ನೈತಿಕತೆ ಸಿ. ಟಿ. ರವಿ ಯವರಿಗೆ ಇಲ್ಲ. ಕ್ಷೇಮೆ ಕೇಳದೆ ಇದ್ದರೆ ಅವರು ಬರುವ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು. ಕನ್ನಡ ಸಂಸ್ಕೃತಿಯ ಸಚಿವ ಸುನಿಲ್ ಕುಮಾರ್ ದೈವ ನರ್ತನ ಕಲಾವಿದರಿಗೆ ಪಿಂಚಣಿ ನೀಡುವ ಭರವಸೆ ನೀಡಿದ್ದರು ಆದರೆ ಇವರಿಗೆ ಪಿಂಚಣಿ ಭಾಗ್ಯ ಬರಲಿಲ್ಲ ಇದು ಕೂಡ ದೈವ ನರ್ತನ ಕಲಾವಿದರಿಗೆ ಮಾಡಿದ ಅವಮಾನ.

ಇತ್ತೀಚಿನ ದಿನ ಗಳಲ್ಲಿ ಕೊರಗಜ್ಜನ ಕಟ್ಟೆ ಮಾಡಿ ಹರಕೆಯ ವಿಷಯದಲ್ಲಿ ದುಡ್ಡು ಮಾಡುವ ದಂಧೆ ನಡೆಯುತ್ತಿದೆ, ಯಕ್ಷಗಾನ, ನಾಟಕಗಳಲ್ಲಿ ಕೊರಗಜ್ಜನಿಗೆ ಅವಮಾನ ವಾಗಿದೆ ಇದನ್ನು ತಕ್ಷಣ ನಿಲ್ಲಿಸ ಬೇಕು. ಈ ಎಲ್ಲಾ ಅವಮಾನವನ್ನು ಖಂಡಿಸಿ ದೈವಾರಾಧಕರ ಜಿಲ್ಲಾ ಸಮಾವೇಶ ಮಾಡಲಾಗುವುದು ಎಂದರು.

ಗೋಷ್ಠಿಯಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಉಪಾಧ್ಯಕ್ಷ ರಾಮು ಶಿಶಿಲ, ಮಾಜಿ ಕಾರ್ಯದರ್ಶಿ ಅನಂತ ಮುಂಡಾಜೆ, ದೈವಾರಾಧನ ಸಮಿತಿ ಅಧ್ಯಕ್ಷ ಜನಾರ್ದನ ಬಳ್ಳಮಂಜ, ಯುವ ವೇದಿಕೆಯ ಮಾಜಿ ಕಾರ್ಯದರ್ಶಿ ರಮೇಶ್ ಕೇಳ್ತಾಜೆ ಉಪಸ್ಥಿತರಿದ್ದರು

See also  ಕನ್ಯಾಕುಮಾರಿ:  'ಭಾರತ್ ಜೋಡೋ ಯಾತ್ರೆ' ರಾಜಕೀಯದ ಟರ್ನಿಂಗ್ ಪಾಯಿಂಟ್ ಆಗಲಿದೆ ಎಂದ ಕಾಂಗ್ರೆಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು