News Kannada
Thursday, March 30 2023

ಮಂಗಳೂರು

ಮಂಗಳೂರು: ಕಸ ವಿಲೇವಾರಿಗೆ ಕ್ರಮಕೈಗೊಳ್ಳಲು ಸಿಪಿಐಎಂ ಒತ್ತಾಯ

Mangaluru: Cpi(M) demands immediate fulfillment of demands of pourakarmikas and steps to dispose of garbage
Photo Credit :

ಮಂಗಳೂರು: ವೇತನ ಹೆಚ್ಚಳ ಸೇರಿದಂತೆ ಹಲವು ಬಗೆಯ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರಕಾರ್ಮಿಕರಿಗೆ ಸ್ಪಂದಿಸದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ, ದಲಿತ ವಿರೋಧಿ ನಡೆಯನ್ನು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ವಿರೋಧಿಸುತ್ತದೆ ಹಾಗೂ ಪೌರ ಕಾರ್ಮಿಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಮುಂದಾಗಬೇಕು ಮತ್ತು ನಗರದಲ್ಲಿ ಕಸ ವಿಲೇವಾರಿಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತದೆ.

ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರು ತಮ್ಮ ಉದ್ಯೋಗದ ನೇರ ನೇಮಕಾತಿ ಮತ್ತು ಖಾಯಂಗೊಳಿಸಲು ಸೇರಿದಂತೆ ಇತರೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಳೆದ ಹಲವಾರು ವರುಷಗಳಿಂದ ಸಂಘಟಿತ ಹೋರಾಟಗಳನ್ನು ನಡೆಸುತ್ತಾ ಬಂದಿದ್ದಾರೆ ಆದರೆ ಸರಕಾರಗಳು ಈವರೆಗೂ ಅವರ ಬೇಡಿಕೆಗಳಿಗೆ ಸ್ಪಂದಿಸದೆ ಕಾರ್ಮಿಕ ವಿರೋಧಿ ಮಾತ್ರವಲ್ಲ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆಯಿಂದ ಕಸ ವಿಲೇವಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಮಂಗಳೂರು ನಗರದ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದು ಗಬ್ಬು‌ ನಾರುತ್ತಿದೆ.

ಮಂಗಳೂರು ಮಹಾನಗರ ಪಾಲಿಕೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಸರಲ್ಲಿ ಪ್ರತಿ ಮನೆಗಳಿಂದ ವಿಪರೀತ ತೆರಿಗೆಯನ್ನು ಸಂಗ್ರಹಿಸುತ್ತಿದೆ. ಬಿಜೆಪಿ ಸರಕಾರ ಸ್ವಚ್ಚ ಭಾರತ ,ಸ್ವಚ್ಛ ಮಂಗಳೂರು ಎಂಬ ಹೆಸರಿನಲ್ಲಿ ನೂರಾರು ಕೋಟಿ ಕೇಂದ್ರ,ರಾಜ್ಯ ಸರಕಾರದ ಅನುದಾನ ಹಣಗಳನ್ನು ಪೋಲು ಮಾಡುತ್ತಿದ್ದರೂ ನಿಜವಾಗಿಯೂ ಮಂಗಳೂರನ್ನು ಸ್ವಚ್ಚವಾಗಿಡುವ ಪೌರಕಾರ್ಮಿಕರ ವೇತನ ಹೆಚ್ಚಳಕ್ಕಾಗಲಿ ಅಥವಾ ಅವರ ಉದ್ಯೋಗದ ಭದ್ರತೆಗಾಗಲಿ ವಿನಿಯೋಗಿಸದೆ ಕೇವಲ ಕಮಿಷನ್ ಲೂಟಿ ಹೊಡೆಯಲು ಉಪಯೋಗಿಸಿದೆ.

ಗುತ್ತಿಗೆ ಪೌರಕಾರ್ಮಿಕರು ನಡೆಸುವ ಹೋರಾಟ ನ್ಯಾಯಯುತವಾಗಿದ್ದು ಅವರು ನಡೆಸುವ ಹೋರಾಟಕ್ಕೆ ಸಿಪಿಐಎಂ ಪಕ್ಷ ಬೆಂಬಲವನ್ನು ವ್ಯಕ್ತಪಡಿಸುತ್ತದೆ. ರಾಜ್ಯ ಸರಕಾರ ಈ ಕೂಡಲೇ ಗುತ್ತಿಗೆ ಪೌರಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಬೇಕು. ಸಮಾನ ವೇತನ ಮತ್ತು ನೇರವೇತನ ಸಹಿತ ಅವರು ಸರಕಾರದ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಕಳೆದ ಕೆಲವು ದಿನಗಳಿಂದ ಕಸ ವಿಲೇವಾರಿಗೊಳ್ಳದೆ ಬಾಕಿಯಾಗಿರುವ ಕಸಗಳನ್ನು ವಿಲೇವಾರಿಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಕೂಡಲೇ ಕ್ರಮಕೈಗೊಳ್ಳಬೇಕೆಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

See also  ರಾಮನಗರ: ಕುಮಾರಸ್ವಾಮಿ ಅವರ ಯಾವುದೇ ಗಿಮಿಕ್ ಕೆಲಸ ಮಾಡುವುದಿಲ್ಲ ಎಂದ ಸಿ.ಪಿ.ಯೋಗೇಶ್ವರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು