News Kannada
Monday, September 25 2023
ಮಂಗಳೂರು

ಮಂಗಳೂರು: ಕದ್ರಿ ವಾರ್ಡ್ ನಲ್ಲಿ 2 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕಾಮತ್ ಗುದ್ದಲಿ ಪೂಜೆ

Mangaluru: Rs 2 crore seized in Kadri ward MLA Kamath guddali puja for development works
Photo Credit : News Kannada

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 33ನೇ ಕದ್ರಿ ವಾರ್ಡಿನ ಆಳ್ವಾರಿಸ್ ರಸ್ತೆಯ ಅಗಲೀಕರಣ, ಚರಂಡಿ ಹಾಗೂ ಫುಟ್‌ಪಾತ್ ನಿರ್ಮಾಣಕ್ಕಾಗಿ 2 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಶುಕ್ರವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ನಗರದ ಅಭಿವೃದ್ಧಿ ವಿಚಾರದಲ್ಲಿ ತಾವು ನೀಡಿರುವ ಆದ್ಯತೆ ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರಗಳ ಬೆಂಬಲವನ್ನು ವಿವರಿಸಿದರು. ಸ್ಥಳೀಯ ಕಾರ್ಪೊರೇಟರ್ ಮನೋಹರ್ ಶೆಟ್ಟಿ ಅವರ ಒತ್ತಾಸೆಯಂತೆ ಈ ಅಭಿವೃದ್ಧಿ ಕಾಮಗಾರಿಗಳಿಗೆ ಮೇಯರ್ ಜಯಾನಂದ ಅಂಚನ್‌ ಅವರ ಮೂಲಕ ಚಾಲನೆ ನೀಡಲಾಗಿದೆ ಎಂದು ಶಾಸಕ ಕಾಮತ್‌ ಹೇಳಿದರು.

ಈ ಭಾಗದ ಕಾಂಕ್ರೀಟ್ ರಸ್ತೆಗೆ ಈಗಾಗಲೇ ಅನುದಾನ ಒದಗಿಸಲಾಗಿದ್ದು, 2 ಕೋಟಿ ರೂ.ಗಳ ವೆಚ್ಚದಲ್ಲಿ ಚರಂಡಿ, ಫುಟ್‌ಪಾತ್‌, ಲೈಟ್ ಕಂಬಗಳ ದುರಸ್ತಿ ಕಾರ್ಯ ನಡೆಯಲಿದೆ. ನಗರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು, ಒಟ್ಟಾರೆ 4,000 ಕೋಟಿಗೂ ಅಧಿಕ ಅನುದಾನ ಬಂದಿದೆ. 2025ರ ಹೊತ್ತಿಗೆ ಮಂಗಳೂರಿನ ಚಿತ್ರಣವನ್ನು ಸಮಗ್ರವಾಗಿ ಬದಲಿಸುವ ಉದ್ದೇಶ ಹೊಂದಲಾಗಿದೆ ಎಂದು ಕಾಮತ್ ಹೇಳಿದರು.

ಈಗಾಗಲೇ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇವೆ. ಮುಂದೆ ಮತ್ತೆ ಮುಂದೆಯೂ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಸ್ಥಳೀಯ ಕಾರ್ಪೊರೇಟರ್ ಕದ್ರಿ ಮನೋಹರ್ ಶೆಟ್ಟಿ, ಲೀಲಾವತಿ‌ ಪ್ರಕಾಶ್, ವಿಶ್ವ ಹಿಂದೂ ಪರಿಷತ್‌ ಮುಖಂಡರಾದ ಶರಣ್ ಪಂಪ್‌ವೆಲ್‌, ಯಶವಂತ್, ವಿಜಯ್ ಕುಮಾರ್, ಅಶೋಕ್, ತಾರಾನಾಥ್ ಶೆಟ್ಟಿ, ಯಶವಂತ ನಾಯಕ್, ವಸಂತ್, ದಿನೇಶ್ ಅಮೀನ್, ಮನೋಜ್ ನಂತೂರು, ವಿಜಿತ್ ಶೆಟ್ಟಿ, ನಾಗೇಶ್ ಕದ್ರಿ, ಸಚಿನ್ ಕದ್ರಿ, ಬಿಪಿನ್ ಶೆಟ್ಟಿ, ಚಂದ್ರಕಾಂತ್, ಪ್ರಸಾದ್, ತುಳಸಿ ಕದ್ರಿ, ಚವಣ್ ಕುಮಾರ್, ಹೇಮಾನಂದ ಕೊಡಿಯಾಲಬೈಲ್, ಕೇಶವ್ ಕದ್ರಿ, ಸಚಿನ್, ಸಹನ್, ಅವಿನಾಶ್ ರೈ, ಶ್ರೀನಾಥ್, ಪ್ರತೀಕ್ ಶೆಟ್ಟಿ, ಪ್ರದೀಪ್ ಆಚಾರ್ಯ, ಪ್ರತಾಪ್ ಚಂದ್ರ ಶೆಟ್ಟಿ, ಮುಕುಂದ್, ಜಗದೀಶ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

See also  ಬೆಂಗಳೂರು: ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು