News Kannada
Wednesday, October 04 2023
ಮಂಗಳೂರು

ಬಂಟ್ವಾಳ: ಪರವಾನಿಗೆ ಇಲ್ಲದೆ ಜಾನುವಾರು ಸಾಗಾಟ, ಆರೋಪಿ ಬಂಧನ

Bantwal: Accused arrested for transporting cattle without licence
Photo Credit : Pexels

ಬಂಟ್ವಾಳ: ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು,ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ.

ವಾಹನದಲ್ಲಿ ಹಿಂಸಾತ್ಮಕ ವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು ಸಹಿತ ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಉಪನಿರೀಕ್ಷಕನಾದ ಉದಯರವಿ ವೈಎಂ ಅವರು ನಿನ್ನೆ ಫರಂಗಿಪೇಟೆಯಲ್ಲಿ ರೌಂಡ್ಸ್ ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಪಿಕ್‌ ಅಪ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದೆ.

ಇನ್ನು ಈ ವೇಳೆ ಅಮ್ಮೆಮ್ಮಾರ್‌ ರೈಲ್ವೆ ಕ್ರಾಸಿಂಗ್ ಬಳಿ ಪಿಕ್‌ ಅಪ್‌ ವಾಹನ ಬಂದಿದ್ದು, ಕೂಡಲೇ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದಾಗ ಸ್ವಲ್ಪ ಮುಂದಕ್ಕೆ ನಿಲ್ಲಿಸಿದ್ದು, ಬಳಿಕ ವಾಹನದ ಹತ್ತಿರ ಹೋದಾಗ ಚಾಲಕ ಪ್ರವೀಣ್ ಪೋಲೀಸರ ಬಲೆಗೆ ಬಿದ್ದಿದ್ದಾನೆ ಉಳಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ರೋಯಲ್‌ ಸಲ್ದಾನ ಮತ್ತು ಸಮೀಮ್‌ ಅಡ್ಯಾರ್‌ ಪದವು ಎಂಬವರು ಪರಾರಿಯಾಗಿದ್ದಾರೆ

ಜಾನುವಾರುಗಳನ್ನು ವದೆ ಮಾಡುವ ಉದ್ದೇಶದಿಂದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳ ವಿರುದ್ಧ ಕಲಂ 5, 7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು 11(D) ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಮಂಗಳೂರು: ಎಸ್.ಡಿ.ಪಿ.ಐ.ಯನ್ನು ಗುರಿಯಾಗಿಸಿ ಎನ್.ಐ.ಎ.ಕಾರ್ಯಾಚರಣೆ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು