News Kannada
Wednesday, October 04 2023
ಮಂಗಳೂರು

ಕರ್ಣಾಟಕ ಬ್ಯಾಂಕ್ ಡಿಜಿಟಲೀಕರಣ ಮತ್ತು ಆತ್ಮನಿರ್ಭರ ಭಾರತಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ

Karnataka Bank is laying great emphasis on digitisation and Aatmanirbhar Bharat.
Photo Credit : By Author

ಬಂಟ್ವಾಳ: ದೇಶದ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಕಳೆದ ೧೦೦ ವರ್ಷಗಳಿಂದ ಗುಣಮಟ್ಟದ ಸೇವೆ ಜೊತೆಗೆ ಗ್ರಾಮೀಣ ಜನತೆಗೆ ಮಾನವೀಯ ಸಂಬಂದಿಸಿದ ಲಾಭದಾಯಕವಾಗಿ ಕಾರ್ಯನಿರ್ವಹಿಸುತ್ತಿರುವ ಕರ್ಣಾಟಕ ಬ್ಯಾಂಕ್ ಡಿಜಿಟಲೀಕರಣ ಮತ್ತು ಆತ್ಮನಿರ್ಭರ ಭಾರತಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಬ್ಯಾಂಕಿನ ಮಾನವ ಸಂಪನ್ಮೂಲ ವಿಭಾಗದ ಮಹಾ ಪ್ರಬಂಧಕ ಜಯ ನಾಗರಾಜ ರಾವ್ ಹೇಳಿದ್ದಾರೆ.

ಇಲ್ಲಿನ ವಾಮದಪದವಿನಲ್ಲಿ ಸೋಮವಾರ ಶುಭಾರಂಭಗೊಂಡ ಕರ್ಣಾಟಕ ಬ್ಯಾಂಕಿನ ೯೦೭ನೇ ಪಿಲಿಮೊಗರು ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ ನೂತನ ಶಾಖೆ ಉದ್ಘಾಟಿಸಿ ಮಾತನಾಡಿ, ವಾಮದಪದವು ಪರಿಸರದಲ್ಲಿ ಹಲವಾರು ಸಹಕಾರಿ ಸಂಘ ಮತ್ತು ಎರಡು ರಾಷ್ಟ್ರೀಕೃತ ಬ್ಯಾಂಕ್ ಕಾರ್ಯ ನಿರ್ವಹಿಸುವ ಮೂಲಕ ಅಭಿವೃದ್ಧಿಯ ಕಡೆಗೆ ಸಾಗುತ್ತಿದೆ ಎಂದರು. ಸ್ಥಳೀಯ ವೈದ್ಯ ಡಾ. ರವಿ ಎನ್.ಶರ್ಮಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕ್ ಸಿಬ್ಬಂದಿಗಳು ಜನಸ್ನೇಹಿಯಾಗಿ ಗ್ರಾಹಕರ ಮನಸ್ಸು ಗೆಲ್ಲಬೇಕು ಎಂದರು.

ಇದೇ ವೇಳೆ ಕಟ್ಟಡ ಮಾಲೀಕ ನೋಣಯ್ಯ ಬಂಗೇರ ಭವಾನಿ ದಂಪತಿಯನ್ನು ಸನ್ಮಾನಿಸಲಾಯಿತು.ಮಂಗಳೂರು ಪ್ರಾದೇಶಿಕ ಸಹಾಯಕ ಪ್ರಬಂಧಕ ಡ್ಯಾನಿಶ್ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಶಾಖಾಧಿಕಾರಿ ಹರಿಕೃಷ್ಣ ನಾಯ್ಕ್ ವಂದಿಸಿದರು. ಆಶಾ ಜಿ. ಕಾರ್ಯಕ್ರಮ ನಿರೂಪಿಸಿದರು.

See also  ಮಂಗಳೂರು: ಹಣಕ್ಕಾಗಿ ವ್ಯಕ್ತಿಯನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು