News Kannada
Tuesday, May 30 2023
ಮಂಗಳೂರು

ಸಮಾಜಸೇವಕ ನಸೀರ್‌ ಅಹಮ್ಮದ್’ಗೆ ಡಾ.ಎಪಿಜೆ ಅಬ್ದುಲ್‌ ಕಲಾಂ ಸದ್ಬಾವನಾ ಪ್ರಶಸ್ತಿ

Social worker Naseer Ahmed conferred with Dr APJ Abdul Kalam Sadbhavana Award
Photo Credit : News Kannada

ಮಂಗಳೂರು: ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಮತ್ತು ಸೃಷ್ಟಿ ಸಂಸ್ಥೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಮಟ್ಟದ ಕರ್ನಾಟಕ ವೈಭವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಸಾಲಿನ ಡಾ.ಎಪಿಜೆ ಅಬ್ದುಲ್‌ ಕಲಾಂ ಸದ್ಬಾವನಾ ಪ್ರಶಸ್ತಿಗೆ ಚಿಕ್ಕಮಗಳೂರಿನ ಸಮಾಜಸೇವಕ ನಸೀರ್‌ ಅಹಮ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಏಪ್ರಿಲ್‌ 9ರಂದು ಬೆಂಗಳೂರಿನ ಚಾಮರಾಜ ಪೇಟೆ ಕನ್ನಡ ಸಾಹಿತ್ಯ ಪರಿಷತ್‌ ಆವರಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡುವರು. ಸಮಾಜಸೇವೆ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಸೀರ್‌ ಅಹಮ್ಮದ್ ಪರಿಚಯ:
ಮೂಲತಃ ಚಿಕ್ಕಮಗಳೂರಿನವರಾದ ನಸೀರ್‌ ಅಹಮ್ಮದ್ ಬಿಸಿನೆಸ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಶಸ್ತಿ ಘೋಷಣೆ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಸೀರ್‌ ನ್ಯೂಸ್ ಕನ್ನಡದ ಜೊತೆ ಮಾತನಾಡಿದ್ದು, ನಾನು ಯಾವುದೇ ಪ್ರಶಸ್ತಿಗೆ ಬಯಸಿ ಈ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿಲ್ಲ ಸಮಾಜದ ಒಳಿತಿಗಾಗಿ ಮತ್ತು ಚಿಕ್ಕಮಗಳೂರಿನ ಜನರು ಹಸಿವು ಮುಕ್ತವಾಗಿ ಬದುಕಬೇಕು ಎಂಬ ಮಹದಾಸೆಯೊಂದಿಗೆ ಈ ಕಾರ್ಯಗಳನ್ನು ಮಾಡುತ್ತಿದ್ದೇನೆ. ಈ ಸಮಾಜಮುಖಿ ಕಾರ್ಯವನ್ನು ಪರಿಗಣಿಸಿದ್ದಕ್ಕಾಗಿ ನಾನು ಸಮಾಜ, ಸಂಘಟನೆಗೆ ಧನ್ಯವಾದ ಸಮರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

See also  ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಒತ್ತು: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು