News Kannada
Friday, September 22 2023
ಮಂಗಳೂರು

ಪುತ್ತೂರು: ರಾಸಲೀಲೆ ಅಪಪ್ರಚಾರ, ಮಹಾಲಿಂಗೇಶ್ವರನ ಮೊರೆಹೋದ ಮಠಂದೂರು

Puttur: Mathandur turns to Mahalingeshwara
Photo Credit : News Kannada

ಪುತ್ತೂರು: ಮಹಿಳೆಯೊಬ್ಬರ ಜತೆ ಅಕ್ರಮ ಸಂಬಂಧವಿದೆ ಅನ್ನುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪುತ್ತೂರಿನ ಹಾಲಿ ಶಾಸಕ ಸಂಜೀವ ಮಠಂದೂರು ಶಾಕ್ ಆಗಿದ್ದಾರೆ. ಮಾತ್ರವಲ್ಲ ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಪುತ್ತೂರಿನ ಕಾರ್ಣಿಕ ಕ್ಷೇತ್ರವಾಗಿರುವ ಮಹಾಲಿಂಗೇಶ್ವರನ ಮೊರೆ ಹೋಗಲು ನಿರ್ಧರಿಸಿದ್ದಾರೆ.

ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳನ್ನು ನಾನು ನಂಬಿದ ದೇವರೇ ನೋಡಿಕೊಳ್ಳಬೇಕು ಎಂದು ಮಠಂದೂರು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಸ್ವತಃ ಪತ್ರಿಕಾ ಪ್ರಕಟಣೆ ಹೊರಡಿಸಿ ಮಠಂದೂರು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
‘ನಾನು ಪುತ್ತೂರಿನಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ.

ಜನ ಸೇವೆಯೇ ಜನಾರ್ಧನ ಸೇವೆ ಅಂದುಕೊಂಡು ಕೆಲಸ ಮಾಡಿದ್ದೇನೆ. ಕೋಟ್ಯಂತರ ರೂ. ಅನುದಾನ ತರಿಸಿದ್ದೇನೆ. ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನನ್ನ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಧಾರ್ಮಿಕ ಅಥವಾ ಸಾಮಾಜಿಕವಾಗಿ ನನ್ನನ್ನು ನಾನು ಹೆಚ್ಚು ತೊಡಗಿಸಿಕೊಂಡಿದ್ದೇನೆ. ಆದರೆ ಕೆಲವರು ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಿದ್ದಾರೆ. ಅಂಥಹವರ ವಿರುದ್ಧ ನಾನು ದೇವರ ಮೊರೆ ಹೋಗಿದ್ದೇನೆ. ನಾನು ನಂಬಿದ ಪುತ್ತೂರಿನ ಮಹಾಲಿಂಗೇಶ್ವರ ದೇವರೇ ಅವರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಮಠಂದೂರು ಪ್ರಾರ್ಥನೆ ಸಲ್ಲಿಸಿದ್ದಾರೆ.

See also  ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ನ್ನು ಮದ್ಯ ಎಂದು ಭಾವಿಸಿ ಕುಡಿದ ವ್ಯಕ್ತಿಯೋರ್ವ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು