News Kannada
Thursday, June 01 2023
ಮಂಗಳೂರು

ಬಿಜೆಪಿಯಲ್ಲಿ ಮಾತ್ರ ಲಿಂಗಾಯತ ಸಿಎಂ, ರಾಜ್ಯಾಧ್ಯಕ್ಷ ನಳಿನ್‌ ಹೇಳಿಕೆ

Photo Credit : News Kannada

ಮಂಗಳೂರು: ಜಗದೀಶ್ ಶೆಟ್ಟರ್ ಹಿರಿಯರ ಮನವೊಲಿಕೆ ನಂತರವೂ ಬಿಜೆಪಿ ಬಿಟ್ಟಿದ್ದಾರೆ. ಕೊನೆಯ ತನಕ ಪ್ರಯತ್ನ ಆಗಿದೆ, ರಾಷ್ಟ್ರೀಯ ನಾಯಕರು ಮನೆ ಬಾಗಿಲಿಗೆ ಹೋದರೂ ಗೌರವ ಕೊಡದೇ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು ಮಾನಸಿಕವಾಗಿ ಯಾವುದೋ ಕಾರಣಕ್ಕೆ ಪಕ್ಷ ಬಿಡೋ ತೀರ್ಮಾನ ತೆಗೊಂಡಿದ್ದಾರೆ. ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತೆ ಅನ್ನೋದನ್ನ ಕಾದು ನೋಡ್ತೇವೆ. ರಾಷ್ಟ್ರದಲ್ಕಿ ನಮ್ಮ ಪಕ್ಷಕ್ಕೆ ಅದರದ್ದೇ ಆದ ನಿಯಮಗಳಿವೆ. ನಮ್ಮ ಪಕ್ಷದಲ್ಲಿ ಬಹಳ ವರ್ಷ ದುಡಿದವರು ಜಗದೀಶ್ ಶೆಟ್ಟರ್. ನಮ್ಮಲ್ಲಿ ಪಾರ್ಲಿಮೆಂಟರಿ ಬೋರ್ಡ್, ಎಲೆಕ್ಷನ್ ಕಮಿಟಿ ನಿರ್ವಹಣೆ ಮಾಡಿ ಅಭ್ಯರ್ಥಿ ಆಯ್ಕೆ ಆಗುತ್ತದೆ. ಯಾರೋ ಒಬ್ಬ ನಮ್ಮಲ್ಲಿ ಅಭ್ಯರ್ಥಿಯನ್ನ ಆಯ್ಕೆ ಮಾಡುವುದಿಲ್ಲ. ಎಲ್ಲಾ ಒಮ್ಮತದ ಅಭಿಪ್ರಾಯದ ಮೇಲೆ ಚುನಾವಣಾ ಪ್ರಕ್ರಿಯೆ ನಡೆಯುತ್ತದೆ. ನಾವು ಮತಗಟ್ಟೆ ಕಾರ್ಯಕರ್ತರ ಓಟ್ ನಲ್ಲಿ ಅಭಿಪ್ರಾಯ ಸಂಗ್ರಹಿಸುತ್ತೇವೆ. ಶೆಟ್ಟರ್ ಕೂಡ ಪಾರ್ಟಿ ಅಧ್ಯಕ್ಷ ಆಗಿದ್ದವರು ಅವರಿಗೆ ಈ ವಿಷಯಗಳೆಲ್ಲ ತಿಳಿದಿದೆ ಎಂದರು.

ಪುತ್ತೂರಿನಲ್ಲಿ ಬಿಜೆಪಿ ವಿರುದ್ದ ಹಿಂದೂ ಮುಖಂಡ ಅರುಣ್ ಪುತ್ತಿಲ ಬಂಡಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪ್ರಜಾಪ್ರಭುತ್ವದಲ್ಲಿ ಯಾರೂ ಬೇಕಾದ್ರೂ ಚುನಾವಣೆಗೆ ಸ್ಪರ್ಧೆ ಮಾಡಬಹುದು. ಅವರ ಆಪೇಕ್ಷೆ ಈಡೇರಾದಾಗ ನಾಮಪತ್ರ ಸಲ್ಲಿಸುತ್ತಾರೆ. ಆದರೆ ಪುತ್ತೂರು ಬಿಜೆಪಿ ಭದ್ರಕೋಟೆ, ಇಲ್ಲಿ ಬಿಜೆಪಿ ಜಯ ಸಾಧಿಸುತ್ತದೆ. ಬಿಜೆಪಿ ಗೆಲ್ಲುತ್ತದೆ. ಕಾರ್ಯಕರ್ತರು ರಾಷ್ಟ್ರೀಯ ವಿಚಾರಧಾರೆ ಜೊತೆ ಕೈ ಜೋಡಿಸಲಿದ್ದಾರೆ. ಬಿಜೆಪಿ ಯಾವುದನ್ನೂ ವಿರೋಧಿಸಲ್ಲ, ನಮಗೆ ಗೆಲುವಾಗುತ್ತದೆ ಎಂದರು. ನಾವು ಯಡಿಯೂರಪ್ಪ ಮಾರ್ಗದರ್ಶನ ಮತ್ತು ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗ್ತಾ ಇದೀವಿ. ಎಲ್ಲಾ ಸಂದರ್ಭದಲ್ಲಿ ಬಿಜೆಪಿ ಮಾತ್ರ ಲಿಂಗಾಯತರನ್ನ ಮುಖ್ಯಮಂತ್ರಿ ಮಾಡುತ್ತದೆ. ಬೇರೆ ಯಾವ ಪಾರ್ಟಿಗೂ ಆ ತಾಕತ್ತಿಲ್ಲ, ಇದ್ದರೆ ಘೋಷಣೆ ಮಾಡಲಿ.

ಕಾಂಗ್ರೆಸ್ ಲಿಂಗಾಯತರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ. ಕಾಂಗ್ರೆಸ್ ಗೆ ಬಹಳ ಕ್ಷೇತ್ರದಲ್ಲಿ ಅಭ್ಯರ್ಥಿ ಕೊರತೆ ಇದೆ. ಡಿಸೆಂಬರ್ ನಲ್ಲೇ ಅವರು ಆಯ್ಕೆ ಪ್ರಕ್ರಿಯೆ ಆರಂಭಿಸಿದರೂ ಈವರೆಗೆ ಆಗಿಲ್ಲ. ನಾವು ಹತ್ತು ದಿವಸದಲ್ಲಿ ಅಭ್ಯರ್ಥಿ ಅಯ್ಕೆ ಪ್ರಕ್ರಿಯೆ ಮುಗಿಸಿದ್ದೇವೆ, ಅವರು ನಾಲ್ಕು ತಿಂಗಳಾಯ್ತು. ಅವರಿಗೆ ಅಭ್ಯರ್ಥಿ ಕೊರತೆ ಇದೆ, ನಮ್ಮ ಬಂಡುಕೋರರಾಗಿ ಹೊರ ಬರೋ ಅಭ್ಯರ್ಥಿಗಳನ್ನು ಕಾಯುತ್ತಿದ್ದಾರೆ. ಕಾಂಗ್ರೆಸ್ ನ ಹೀನಾಯ ಸ್ಥಿತಿ ನೋಡಿ ಬೇಜಾರಾಗ್ತಿದೆ. ಅವರಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗೆ ಫೈಟ್ ನಡೀತಾ ಇದೆ. ಡಿಕೆಶಿ, ಸಿದ್ದರಾಮಯ್ಯ, ಖರ್ಗೆ ಜೊತೆ ಈಗ ಪರಮೇಶ್ವರ್ ರೇಸ್ ನಲ್ಲಿ ಇದ್ದಾರೆ. ಸುಮಲತಾ ನಮಗೆ ಸಹಕಾರ ಕೊಡ್ತಾ ಇದಾರೆ, ಮಂಡ್ಯದಲ್ಲಿ ನಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸ್ತಾರೆ. ರಾಮದಾಸ್ ಅವರ ಬಳಿಯೂ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದೇವೆ. 66-77 ಜನ ಹೊಸ ಮುಖವನ್ನು ಚುನಾವಣೆ ಹೊತ್ತಲ್ಲಿ ತರೋ ಧೈರ್ಯ ಯಾವ ಪಕ್ಷಕ್ಕಿದೆ. ನಾವು ಧೈರ್ಯ ತೋರಿದ್ದೇವೆ, ಹಾಗಾಗಿ ಇದಕ್ಕೆಲ್ಲಾ ಭಯ ಪಡುವುದಿಲ್ಲ ಎಂದರು.

See also  ಉಜಿರೆ: ಎಸ್.ಡಿ.ಯಂ. ಕಾಲೇಜಿನ ವಿದ್ಯಾರ್ಥಿಗಳಿಂದ 'ಗ್ರಾಮ ಸ್ವರಾಜ್' ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು