News Kannada
Wednesday, May 31 2023
ಮಂಗಳೂರು

ಬಂಟ್ವಾಳ: ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ರಾಜೇಶ್ ನಾಯ್ಕ್

Rajesh Naik visits houses to seek votes
Photo Credit : News Kannada

ಬಂಟ್ವಾಳ: ವಿಧಾನ ಸಭಾ ಚುನಾವಣೆಯ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಅವರು  ಬುಧವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಬಂಟ್ವಾಳ ತಾಲೂಕಿನ ಕೊಳ್ನಾಡು, ಮಂಚಿ ಮತ್ತು ಸಾಲೆತ್ತೂರು ಗ್ರಾಮಗಳಲ್ಲಿ ಪ್ರಮುಖರ ಮನೆಗಳಿಗೆ ಹಾಗೂ ಎಸ್.ಸಿ ಕಾಲೋನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಶಾಸಕರು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರಿಗೆ ಕಳೆದ ಐದು ವರ್ಷದಲ್ಲಿ ಕ್ಷೇತ್ರದಲ್ಲಿ ಮಾಡಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರಮುಖ ಯೋಜನೆಗಳ ಬಗ್ಗೆ ತಿಳಿಸಿದ ಅವರು ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಪೂರೈಸಿದೆ ಎಂದು ತಿಳಿಸಿದರು.

ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಯಾವುದೇ ಸಂಘರ್ಷವಿಲ್ಲದೆ, ಸರ್ವರಿಗೂ ಸಮಾನವಾದ ರೀತಿಯಲ್ಲಿ ನ್ಯಾಯ ಒದಗಿಸುವ ಆಡಳಿತ ನಡೆಸಿದ್ದೇನೆ. ಮುಂದಿನ ಅವಧಿಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಜೊತೆ ಶಾಂತಿಯ ಬಂಟ್ವಾಳವನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬೇಕು. ನೀವು ನೀಡಿದ ಪ್ರತಿಯೊಂದು ಮತಕ್ಕೂ ಗೌರವ ಸಿಗುವುದರ ಜೊತೆಗೆ , ನಿಮ್ಮ ಧ್ವನಿಯಾಗುತ್ತೇನೆ ಎಂದರು.

ಪ್ರಮುಖರಾದ ಮಾಧವ ಮಾವೆ, ಪುಷ್ಪರಾಜ್ ಚೌಟ, ಶಿವಪ್ರಸಾದ್ ಶೆಟ್ಟಿ, ರಾಜರಾಮ್ ಹೆಗ್ಡೆ ಕುದ್ರಿಯ, ವಿಶ್ವನಾಥ ಪೂಜಾರಿ ಕಟ್ಟತ್ತಿಲ, ಅಭಿಷೇಕ್ ರೈ, ಲೋಹಿತ್ ಕೆಳಗಿನ ಅಗರಿ, ಹರೀಶ್ ಟೈಲರ್, ಪ್ರಶಾಂತ್ ಶೆಟ್ಟಿ ಅಗರಿ, ಸುಧಾಕರ ಕಾಡುಮಠ, ನಾರಾಯಣ ಶೆಟ್ಟಿ ಕುಲ್ಯಾರು, ಶಂಕರ್ ಟೈಲರ್, ಕೃಷ್ಣಪ್ರಸಾದ್ ಶೆಟ್ಟಿ,ಆನಂದ ಪೂಜಾರಿ, ನಾಗರಾಜ ಆಳ್ವ, ಪಾಪಣ್ಣ, ಗಂಗಾಧರ ಆಚಾರ್ಯ, ಮೋಹನ್ ದಾಸ್ ಹೆಗ್ಡೆ, ಪುಷ್ಪಕಾಮತ್, ವಿಜಯ ಪ್ರಭು, ಪ್ರಮೀಳಾ, ಗಣೇಶ್ ಐತಾಳ್, ಕೇಶವ ರಾವ್ ಮಂಚಿ, ಪ್ರಭಾಕರ ರೈ, ಕೃಷ್ಣಪ್ಪ. ಪುಷ್ಪರಾಜ್, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

See also  ಮಂಗಳೂರು: ಹಿಂದೂ ಕಾರ್ಯಕರ್ತರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು