News Kannada
Saturday, June 03 2023
ಮಂಗಳೂರು

ಆಕಸ್ಮಿಕವಾಗಿ ವಿದ್ಯುತ್ ಲೈನ್ ಸಂಪರ್ಕ: ಮೂವರು ಮಕ್ಕಳಿಗೆ ಗಾಯ

Mangaluru: Power outage in surrounding areas tomorrow
Photo Credit : News Kannada

ಉಜಿರೆ: ದೋಟಿ ಕೊಂಡೊಯ್ಯುತ್ತಿದ್ದ ವೇಳೆ ಅದು ಆಕಸ್ಮಿಕವಾಗಿ ವಿದ್ಯುತ್ ಲೈನ್ ಗೆ ಸಂಪರ್ಕಿಸಿ ಮೂವರು ಮಕ್ಕಳು ಗಾಯಗೊಂಡ ಘಟನೆ ಶನಿವಾರ ಚಾರ್ಮಾಡಿಯಲ್ಲಿ ನಡೆದಿದೆ.

ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ಗೆ ವಿದ್ಯುತ್ ಒದಗಿಸುವ ಮತ್ತು ಅಗತ್ಯ ಸಂದರ್ಭ ಅದರಲ್ಲೆ ರಿಟರ್ನ್ ಲೈನ್ ಇರುವ ಖಾಸಗಿ ಕಂಪೆನಿ ಒಂದರ ಮುಖ್ಯ ಲೈನ್ ಚಾರ್ಮಾಡಿಯಲ್ಲಿ ಹೆದ್ದಾರಿ ಬದಿ ಹಾದು ಹೋಗುತ್ತದೆ.

ಈ ಲೈನ್ ನ ಪಕ್ಕದಲ್ಲಿ ಚಾರ್ಮಾಡಿಯ ಇಮ್ತಿಯಾಜ್ ಅವರ ಮಕ್ಕಳಾದ ಮಹಮ್ಮದ್ ಆಲಿ(16),ಮಹಮ್ಮದ್ ಇನಾಜ್(8)ಹಾಗೂ ಹನೀಫ್ ಅವರ ಪುತ್ರ ಅಯ್ಯಾನ್( 6) ಎಂಬ ಮೂವರು ಮಕ್ಕಳು ಡೋಟಿ ಹಿಡಿದುಕೊಂಡು ಹೋಗುತ್ತಿದ್ದಾಗ ಅದು ವಿದ್ಯುತ್ ಲೈನ್ ನ್ನು ಸ್ಪರ್ಶಿಸಿದೆ.ಇದರಿಂದ ಮಕ್ಕಳಿಗೆ ವಿದ್ಯುತ್ ಶಾಕ್ ಹೊಡೆದು ಬಿದ್ದಿದ್ದಾರೆ.

ಸ್ಥಳೀಯರು ಕೂಡಲೇ ಮಕ್ಕಳನ್ನು ಕಕ್ಕಿಂಜೆ ಹಾಗೂ ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಸುಟ್ಟ ಗಾಯಗಳಿಗೆ ಒಳಗಾಗಿರುವ ಮಕ್ಕಳು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಈ ವಿದ್ಯುತ್ ಪಕ್ಕವೇ ಎಚ್ ಟಿ ವಿದ್ಯುತ್ ಲೈನ್ ಇದ್ದು ಘಟನೆ ನಡೆದ ಸಂದರ್ಭ ಲೋಡ್ ಶೆಡ್ಡಿಂಗ್ ಇದ್ದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ.ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಕುಶಿನಗರ: ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು