News Kannada
Tuesday, May 30 2023
ಮಂಗಳೂರು

ನನ್ನ ಅವಧಿಯಲ್ಲಾದ ಅಭಿವೃದ್ಧಿಗಳೇ ನನಗೆ ಗೆಲುವಿನ ಮೆಟ್ಟಿಲು : ರಮಾನಾಥ ರೈ

Developments during my tenure are the stepping stone to my victory: Ramanath Rai
Photo Credit : News Kannada

ಬಂಟ್ವಾಳ : ನನ್ನ ಅಧಿಕಾರಾವಧಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿನ ಮೆಟ್ಟಿಲು. ನನ್ನ ಅವಧಿ ಹಾಗೂ ಕಳೆದ ಐದು ವರ್ಷದ ಇನ್ನೊಬ್ಬರ ಅಧಿಕಾರವಧಿಯನ್ನು ಜನ ತುಲನೆ ಮಾಡಿ ಈ ಬಾರಿ ಕಾಂಗ್ರೆಸ್ ಗೆಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಹೇಳಿದರು. ಬರಿಮಾರ್ ಗ್ರಾಮದಲ್ಲಿ ಭಾನುವಾರ ಮನೆಮನೆ ಭೇಟಿ ಮಾಡಿ ಮತಯಾಚನೆ ಮಾಡಿದ ಸಂದರ್ಭ ಅವರು ಮಾತನಾಡಿದರು.

ಬಂಟ್ವಾಳ ತಾಲೂಕಿನಾದ್ಯಂತ ಬಹುತೇಕ ಪ್ರಗತಿ ಕಾರ್ಯಗಳು ನನ್ನ ಆಡಳಿತ ಅವಧಿಯಲ್ಲೇ ನಡೆದಿವೆ. ಬಿ.ಸಿ. ರೋಡ್ ನಲ್ಲಿರುವ ತಾಲೂಕು ಆಡಳಿತ ಕಚೇರಿಯಾದ ಮಿನಿವಿಧಾನಸೌಧ, ಬಿ.ಸಿ. ರೋಡ್ ನಲ್ಲಿರುವ ಜಿಲ್ಲೆಯಲ್ಲೇ ಅತ್ಯಂತ ಸುಸಜ್ಜಿತ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಪ್ರವಾಸಿ ಬಂಗ್ಲೆ, ಅಂಬೇಡ್ಕರ್ ಭವನ ಮುಂತಾದ ಹಲವು ಆಡಳಿತಾತ್ಮಕ ಕಚೇರಿಗಳು ತಮ್ಮ ಅವಧಿಯಲ್ಲಿ ನಿರ್ಮಿಸಲಾಗಿದೆ. ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಸುಸಜ್ಜಿತ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ವಸತಿ ನಿವೇಶನ ಹಂಚಿಕೆ, ಮನೆ ನಿರ್ಮಾಣ, ಗುಣಮಟ್ಟದ ಶಿಕ್ಷಣ ವ್ಯವಸ್ಥೆ, ಆರೋಗ್ಯ ಕೇಂದ್ರಗಳನ್ನೂ ದೊಡ್ಡ ಮೊತ್ತದ ಅನುದಾನಗಳನ್ನು ತಂದು ಅಭಿವೃದ್ಧಿ ಪಡಿಸಿದ್ದೇನೆ ಎಂದು ಅವರು ಈ ವೇಳೆ ಸ್ಮರಿಸಿದರು.

ಆದರೆ ಕಳೆದ ಐದು ವರ್ಷಗಳಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಜನ ತಮ್ಮನ್ನು ಗೆಲ್ಲಿಸುವುದಿಲ್ಲ ಎಂದು ಅರಿತಿರುವ ಬಿಜೆಪಿ ಕಳೆದ ಬಾರಿಗಿಂತಲೂ ಹೆಚ್ಚು ಅಪಪ್ರಚಾರದಲ್ಲಿ ನಿರತವಾಗಿದೆ. ಆದರೆ, ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನ ಈ ಬಾರಿ ಕಾಂಗ್ರೆಸ್ ಅನ್ನು ಭಾರೀ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ರೈ ಭರವಸೆ ವ್ಯಕ್ತಪಡಿಸಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

See also  ತುಳು ಅಕಾಡೆಮಿ ಭವನದ ಕಾಮಗಾರಿಗೆ ವೇಗ ನೀಡಲು ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು