News Kannada
Sunday, June 04 2023
ಮಂಗಳೂರು

ಮಂಗಳೂರು: ಮರವೂರು ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ , ಸದ್ಯಕ್ಕಿಲ್ಲ ಕುಡಿಯುವ ನೀರಿನ ಸಮಸ್ಯೆ

mangaluru-maravoor-dam-no-drinking-water-problem-at-present
Photo Credit : News Kannada

ಮಂಗಳೂರು: ಈ ಬಾರಿಯ ಎಲ್ಲೆಡೆ ಕುಡಿಯುವ ನೀರಿಗೆ ತತ್ವಾರ ಉಂಟಾಗುತ್ತಿದ್ದು, ಅಲ್ಲಲ್ಲಿ ಅಣೆಕಟ್ಟುಗಳು ಬರಿದಾಗುತ್ತಿವೆ. ಆದರೆ ಬಜಪೆ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮರವೂರಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಣೆಕಟ್ಟಿನಲ್ಲಿ ಸದ್ಯದ ಮಟ್ಟಿಗೆ ನೀರಿನ ಸಂಗ್ರಹ ಸಾಕಷ್ಟಿದೆ.

ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಉಪ್ಪು ನೀರು ತಡೆ ಅಣೆಕಟ್ಟು. ನದಿಯಲ್ಲಿ ಒಳ ಹರಿವು ಇಲ್ಲದಿದ್ದರೂ ಅಣೆಕಟ್ಟಿನಿಂದ ಮೇಲ್ಭಾಗದಲ್ಲಿ ಸುಮಾರು 18 ಕಿ.ಮೀ. ವ್ಯಾಪ್ತಿಯ ವರೆಗೆ ನೀರಿನ ಸಂಗ್ರಹವಿದೆ. ಇದರಿಂದಾಗಿ ಮಳೆಯಾಗದಿದ್ದರೂ ಆತಂಕ ಪಡುವ ಪರಿಸ್ಥಿತಿ ಇಲ್ಲ. ಘಟ್ಟದ ತಪ್ಪಲಲ್ಲಿ ಮಳೆಯಾಗಿ ನೀರಿನ ಒಳ ಹರಿವು ಹೆಚ್ಚಾದರೆ ಈ ಬಾರಿ ಸಮಸ್ಯೆಯೇ ಇಲ್ಲದಂತೆ ಬೇಸಗೆಯನ್ನು ನಿಭಾಯಿಸಿದಂತಾಗುತ್ತದೆ ಎನ್ನುತ್ತಾರೆ ಅಧಿಕಾರಿಗಳು.

ಅಣೆಕಟ್ಟಿನಿಂದ ಬಜಪೆ ಸುತ್ತಮುತ್ತಲಿನ 14 ಗ್ರಾಮಗಳಿಗೆ ನೀರು ಪೂರೈಕೆಯಾಗುತ್ತಿದೆ. ಬಜಪೆ, ಮರವೂರು, ಕೆಂಜಾರು, ಮೂಡುಶೆಡ್ಡೆ, ಪಡುಶೆಡ್ಡೆ, ಜೋಕಟ್ಟೆ, ಬಡಗ ಎಕ್ಕಾರು, ತೆಂಕ ಎಕ್ಕಾರು, ಪೆರ್ಮುದೆ, ಕುತ್ತೆತ್ತೂರು, ಬಾಳ, ಕಳವಾರು, ಸೂರಿಂಜೆ, ದೇಲಂತಬೆಟ್ಟು ಗ್ರಾಮಗಳಿಗೆ ಮರವೂರು ಅಣೆಕಟ್ಟಿನಿಂದ ನೀರು ಪೂರೈಕೆಯಾಗುತ್ತದೆ. ಅಣೆಕಟ್ಟಿನಿಂದ 5 ಎಂಎಲ್‌ಡಿ ನೀರನ್ನು ಸಂಸ್ಕರಿಸಿ, ಪ್ರತಿ ದಿನ ಪೂರೈಕೆ ಮಾಡಲಾಗುತ್ತಿದೆ.ಅಣೆಕಟ್ಟಿನಲ್ಲಿ ನೀರು ಇರುವುದರಿಂದ ಇಕ್ಕೆಲಗಳಲ್ಲಿರುವ ಕೃಷಿಕರ ಜಮೀನಿಗೂ ಯಥೇಚ್ಛ ನೀರು ಸಿಗುವಂತಾಗಿದ್ದು, ಬಾವಿ, ಕೆರೆಗಳಲ್ಲೂ ನೀರು ಧಾರಾಳವಾಗಿದೆ.

ಒಂದೆಡೆ ನೀರು ಸಾಕಷ್ಟಿದ್ದರೂ, ಇನ್ನೊಂದೆಡೆ ಬಿಸಿಲ ಬೇಗೆ ಹೆಚ್ಚಿರುವುದರಿಂದ ಆವಿಯಾಗುವ ಪ್ರಮಾಣವೂ ಹೆಚ್ಚಿದೆ. ಬೇಸಗೆ ಮಳೆಯ ನಿರೀಕ್ಷೆ ಇರುವುದರಿಂದಾಗಿ ನೀರಿಗೆ ಸಮಸ್ಯೆ ಇಲ್ಲ ಎಂದು ಹೇಳಬಹುದಾದರೂ ನೀರಿನ ನಿಯಮಿತ ಬಳಕೆ ಮಾಡದಿದ್ದರೆ, ಮಳೆಯೂ ಕೈ ಕೊಟ್ಟರೆ ಸಮಸ್ಯೆ ಖಚಿತ ಎನ್ನುವುದನ್ನೂ ಮರೆಯುವಂತಿಲ್ಲ. ಎರಡು ವರ್ಷದ ಹಿಂದೆ ಮರವೂರು ಅಣೆಕಟ್ಟಿನಲ್ಲೂ ನೀರಿನ ಪ್ರಮಾಣ ಬಹುತೇಕ ಕಡಿಮೆಯಾಗಿ ತಳ ಕಾಣುತಿತ್ತು ಎನ್ನುವುದನ್ನು ಇಲ್ಲಿ ನೆನಪಿಸಬಹುದು.

ಮರವೂರು ಕಿಂಡಿ ಅಣೆಕಟ್ಟಿನ ಕೆಳ ಭಾಗದ ನೀರು, ಕೈಗಾರಿಕೆಗಳ ಕಲುಷಿತ ನೀರು ಸೇರಿ ಮಲೀನಗೊಂಡಿದೆ. ಇದರಿಂದ ನೀರು ಸಂಪೂರ್ಣ ಕಪ್ಪಾಗಿದ್ದು, ಆಯಿಲ್‌ ಪದರ ನೀರಿನ ಮೇಲ್ಭಾಗದಲ್ಲಿ ಎದ್ದು ಕಾಣುತ್ತಿದೆ. ಈ ನೀರು ಉಬ್ಬರದ ಸಂದರ್ಭ ಮೇಲಕ್ಕೆ ಬರುವುದರಿಂದ ಅಣೆಕಟ್ಟಿನ ಒಳಗೆ ಕೆಲವು ಕಡೆಗಳಲ್ಲಿ ಸೋರಿಕೆಯಾಗುತ್ತಿದೆ. ಇದರಿಂದ ಡ್ಯಾಂನಲ್ಲಿರುವ ಕುಡಿಯುವ ನೀರು ಕೂಡ ಕಲುಷಿತವಾಗುವ ಆತಂಕ ಉಂಟಾಗಿದೆ ಎನ್ನುತ್ತಾರೆ ಸ್ಥಳೀಯರು.

See also  ಇಂದು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿರುವ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು