News Kannada
Friday, June 09 2023
ಮಂಗಳೂರು

ಉಳ್ಳಾಲ: ಮುಖಂಡರಿಗೆ ಮಾಹಿತಿಯಿಲ್ಲದೆ ನಾಮಪತ್ರ ಹಿಂಪಡೆದ ಜೆಡಿಎಸ್ ಅಭ್ಯರ್ಥಿ

JD(S) candidate withdraws nomination papers on death threat, case filed against Congress leaders
Photo Credit : News Kannada

ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಅಲ್ಲದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪಿಸಿದ್ದಾರೆ.

ಅಲ್ತಾಫ್ ಕುಂಪಲ ಇವರು ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡ ಅವರು ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬ್ಲ್ಯಾಕ್ ಫಾರಂ ಪಡೆದುಕೊಂಡಿದ್ದರು. ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.

ಈ ಕುರಿತು ಎ.22 ರಂದು ನೋಟೀಸು ಬೋರ್ಡಿನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆ. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ.

See also  ಸಿನಿರಮಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಡಾಲಿ ಧನಂಜಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು