ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ, ಯುವ ಬಿಲ್ಲವ ಮುಖಂಡ ಪದ್ಮರಾಜ್ ಅವರನ್ನು ನೇಮಕ ಮಾಡಲಾಗಿದೆ.
ಪದ್ಮರಾಜ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೊನೆ ಕ್ಷಣದಲ್ಲಿ ಅವರ ಬದಲಿಗೆ ಜೆ. ಆರ್. ಲೋಬೋ ಅವರಿಗೆ ಟಿಕೆಟ್ ದೊರೆತಿತ್ತು. ಅದೇರೀತಿ ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಗಂಗಾಧರ ಗೌಡ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಗಂಗಾಧರ ಗೌಡ ಅವರ ಮನೆ, ಶಿಕ್ಷಣ ಸಂಸ್ಥೆಗಳ ಮೇಲೆ ಸೋಮವಾರ ಬೆಳಗ್ಗೆ ಐಟಿ ದಾಳಿಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.