News Karnataka Kannada
Friday, April 19 2024
Cricket
ಮಂಗಳೂರು

4 ಕೋಟಿ ಮೌಲ್ಯದ ರಕ್ತಚಂದನ ಸಹಿತ 7 ಆರೋಪಿಗಳ ಬಂಧನ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit :

ಮೂಡುಬಿದಿರೆ: ಮಂಗಳೂರು ಅರಣ್ಯ ಸಂಚಾರಿ ದಳ ಅಧಿಕಾರಿಗಳು ಬುಧವಾರ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ತಮಿಳುನಾಡಿನಿಂದ ಮಂಗಳೂರು ಬಂದರಿಗೆ ಮಿನಿ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ ಸುಮಾರು ₹ 4.15 ಕೋಟಿ ಮೌಲ್ಯದ ರಕ್ತ ಚಂದನ ಮರದ ದಿಮ್ಮಿಗಳ ಸಹಿತ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ನೆಲ್ಲೂರಿನ ರಾಜೇಶ್ ರೆಡ್ಡಿ, ಕೇರಳ ಆನೆಕ್ಕಲ್‌ನ ಸುಭಾಸ್, ಶಾಮೀರ್ ಮತ್ತು ಮಹಮ್ಮದ್ ಕುಂಞಿ, ತಮಿಳುನಾಡು ತಿರುವೆಳ್ಳೂರಿನ ಪಾಲರಾಜ್, ದಿನೇಶ್ ಕುಮಾರ್ ಹಾಗೂ ಕೊಯಮತ್ತೂರಿನ ಅನಿಲ್ ಕುಮಾರನ್ನು ಬಂಧಿತರು.

ಮಂಗಳೂರು-ಉಡುಪಿ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ನೇತೃತ್ವದ ತಂಡ ಮೂಲ್ಕಿ ಸಮೀಪದ ಕೆಂಚನಕೆರೆ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಬಂದರು ಕಡೆ ಹೋಗುತ್ತಿದ್ದ ಮಿನಿ ಲಾರಿ ನಿಲ್ಲಿಸಿ ತಪಾಸಣೆ ನಡೆಸಿದಾಗ 316 ರಕ್ತ ಚಂದನ ಮರದ ದಿಮ್ಮಿಗಳು ಪತ್ತೆಯಾದವು. ಅವುಗಳನ್ನು ಮಾವಿನ ಹಣ್ಣು ತುಂಬಿರುವ ಗೋಣಿ ಚೀಲಗಳಿಂದ ಮುಚ್ವಲಾಗಿತ್ತು. ಮಿನಿ ಲಾರಿಗೆ ಬೆಂಗಾವಲಾಗಿದ್ದ ಮಹೇಂದ್ರ ಬೊಲೆರೊ ವಾಹನವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ, ಸಂಪತ್ ಪಟೇಲ್, ಉಪವಲಯ ಅರಣ್ಯಾಧಿಕಾರಿಗಳಾದ ಕರುಣಾಕರ ಆಚಾರ್ಯ, ಪ್ರದೀಪ ಬಿ.ಎಸ್, ಕಾಂತರಾಜ್, ವಿಕಾಸ್ ಶೆಟ್ಟಿ, ಕೃಷ್ಣಪ್ಪ ಜೆ., ಸಿಬ್ಬಂದಿ ಪಾಲ್ಗೊಂಡಿದ್ದರು. ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ಹಾಗೂ ಇತರ ಅಧಿಕಾರಿಗಳು ಪ್ರಕರಣದ ಪತ್ತೆಗೆ ನೆರವಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು