News Karnataka Kannada
Saturday, April 27 2024
ಮಂಗಳೂರು

ಪುತ್ರಿಯ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಸಾವಿಗೆ ಶರಣಾದ ಕಾರ್ಮಿಕ

A laborer surrendered to death as he could not afford to pay for his daughter's treatment
Photo Credit : Pexels

ಬಂಟ್ವಾಳ: ಪುತ್ರಿಯ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಮನನೊಂದು ಕೂಲಿ ಕಾರ್ಮಿಕನೋರ್ವ ಮನೆಯ ಪಕ್ಕದ ಗುಡ್ಡದಲ್ಲಿ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡ ಘಟನೆ ಮೇ 18ರಂದು ಬೆಳಕಿಗೆ ಬಂದಿದೆ.

ಶಂಭೂರು ಗ್ರಾಮದ ಮಜಿಬೈಲು ನಿವಾಸಿ ಕೂಲಿ ಕಾರ್ಮಿಕ ಕೃಷ್ಣಪ್ಪ ಮೂಲ್ಯ ಆತ್ಮಹತ್ಯೆ ಮಾಡಿಕೊಂಡವರು. ಕೃಷ್ಣಪ್ಪ ಮೂಲ್ಯ ಅವರ ಪತ್ನಿ ಯೋಗಿನಿ ಅವರು ತನ್ನ ತಾಯಿ ಮನೆ ಬೇಂಕ್ಯದಲ್ಲಿ ವಾಸವಾಗಿದ್ದು, ಅವರ 2ನೇ ಪುತ್ರಿಗೆ ಅನಾರೋಗ್ಯವಿದ್ದು, ಚಿಕಿತ್ಸೆಗೆ ಹಣವಿಲ್ಲ ಎಂದು ಬೇಸರಿಸಿಕೊಳ್ಳುತ್ತಿದ್ದರು.

ಸುರತ್ಕಲ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಅವರು ಮೇ 16ರಂದು ಪತ್ನಿಯ ತಾಯಿ ಮನೆಗೆ ತೆರಳಿ ಮರುದಿನ ಸುರತ್ಕಲ್‌ಗೆ ಹೋಗುವುದಾಗಿ ತೆರಳಿದ್ದರು. ಆದರೆ ಅವರು ನೇರವಾಗಿ ಶಂಭೂರಿಗೆ ತೆರಳಿ ಮನೆಯ ಪಕ್ಕದ ಗುಡ್ಡದಲ್ಲಿ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು