ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ.ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಕೇರಾ ತಾಲೂಕಿನ ಆಲದಮರದ ತಾಂಡಾದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ಮ್ಯಾನ್ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕಿ ನಾಯಕ್ಗೆ ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.
ಶಾಸಕರು ತಡವಾಗಿ ಘಟನಾ ಸ್ಥಳಕ್ಕೆ ಬಂದಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. 28ರ ಹರೆಯದ ವಿರೂಪಾಕ್ಷ ಜೂನ್ 4ರಂದು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದರು. ವಿದ್ಯುತ್ ಪೂರೈಕೆಯಲ್ಲಿನ ಏರುಪೇರು ಸರಿಪಡಿಸಲು ವಿದ್ಯುತ್ ಕಂಬ ಹತ್ತಿದ ವೇಳೆ ದುರ್ಘಟನೆ ಸಂಭವಿಸಿತ್ತು. ನಾಯಕ್ ಸ್ಥಳಕ್ಕೆ ಬಂದಾಗ ಆರೋಪಿ ಬಿಜೆಪಿ ಕಾರ್ಯಕರ್ತರು ಆಕೆಯ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ವಿಡಿಯೋವನ್ನು ಸಂಗ್ರಹಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.