ಬೆಳ್ತಂಗಡಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ವಿಷಯದ ವಿರುದ್ಧ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ನವರು ಹಿಂದೂಗಳ ಭಾವನೆ ವಿರುದ್ದ ಹೋಗುತ್ತಿದ್ದಾರೆ.ಒಂದು ರೀತಿಯಲ್ಲಿ ದ್ವೇಷ ಭಾವನೆ ಹಾಗೂ ಹಿಂದೂ ವಿರೋದಿಯಾಗಿ ವರ್ತಿಸುವುದು ಸರಿಯಲ್ಲ. ಬಜರಂಗದಳದ ತಂಟೆಗೆ ಬಂದರೆ ಸಮಸ್ತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಹೇಳಿದರು.
ಈ ಸಂದರ್ಭದಲ್ಲಿ ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ,ರಮೇಶ್ ಧರ್ಮಸ್ಥಳ,ಮೋಹನ್ ಬೆಳ್ತಂಗಡಿ ಹಾಗೂ ಬಜರಂಗದಳದ ನೂರಾರು ಕಾರ್ಯಕರ್ತರು ಇದ್ದರು.