ಬೆಳ್ತಂಗಡಿ: ಸಿಎಂ ವಿರುದ್ಧ ಕೊಲೆ ಆರೋಪ ಮಾಡಿದ್ದ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಲಂ 153, 153A, 505 ಐಪಿಸಿಯಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ದೂರಿನಡಿ ಎಫ್ಐಆರ್ ದಾಖಲಾಗಿದ್ದು, ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪ ಹರೀಶ್ ಪೂಂಜಾ ಮೇಲಿದೆ. ಬೆಳ್ತಂಗಡಿ ಕಿನ್ಯಮ್ಮ ಸಭಾಭವನದಲ್ಲಿ ನಡೆದ ಬಿಜೆಪಿಯ ಅಭಿನಂದನಾ ಕಾರ್ಯಕ್ರಮ ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ದೂರು ನೀಡಿದ್ದರು.