News Kannada
Tuesday, June 06 2023
ಮಂಗಳೂರು

ಬೆಳ್ತಂಗಡಿ: ಕಳ್ಳತನ ಪ್ರಕರಣ, ನಾಲ್ವರ ಬಂಧನ

Belthangady: Four arrested in theft case
Photo Credit : News Kannada

ಬೆಳ್ತಂಗಡಿ: ಕೊಕ್ಕಡದ ಶಾಲೆಯಲ್ಲಿ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದು ಇವರಿಂದ ಕಳ್ಳತನ ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಕಡಬ ತಾಲೂಕಿನ ಕುಟ್ರುಪ್ಪಾಡಿ ನಿವಾಸಿ ರಕ್ಷಿತ್ ಡಿ (24), ತೀರ್ಥೇಶ್ ಎಂ(29), ಯಜ್ಞೇಶ್ ಯು.ಕೆ (30) ಹಾಗೂ ರೋಹಿತ್ ಶೆಟ್ಟಿ (23) ಎಂಬವರಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸರಕಾರಿ ಪ್ರೌಢಶಾಲೆಯ ಬಾಗಿಲು ಮುರಿದು ಅಲ್ಲಿರಿಸಲಾಗಿದ್ದ ಸುಮಾರು 32ಸಾವಿರ ಮೌಲ್ಯದ ಎಂಟು ಬ್ಯಾಟರಿಗಳನ್ನು ಕಳವು ಮಾಡಿದ್ದರು.ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳಿಂದ ಒಂದು ಆಲ್ಟೋ ಕಾರು ಹಾಗೂ ವಿವಿದೆಡೆ ಕಳ್ಳತನ ಮಾಡಿದ ಸುಮಾರು ಎರಡು ಲಕ್ಷ ಮೌಲ್ಯದ ಬ್ಯಾಟರಿಗಳನ್ನು ವಶಪಡಿಸಲಾಗಿದ್ದು ಕಳ್ಳತನಕ್ಕೆ ಉಪಯೋಗಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಜಿಲ್ಲೆಯ ವಿವಿಧ ಠಾಣಾವ್ಯಾಪ್ತಿಯಲ್ಲಿ ಕಳ್ಖತನ ನಡೆಸಿರುವುದು ಬಹಿರಂಗ ಗೊಂಡಿದ್ದು ಉಪ್ಪಿನಂಗಡಿ ಠಾಣಾವ್ಯಾಪ್ತಿಯ ನಾಲ್ಕು ಶಾಲೆಗಳಿಂದ, ಸುಬ್ರಹ್ಮಣ್ಯ ಠಾಣಾವ್ಯಾಪ್ತಿಯ ಎರಡು ಶಾಲೆಗಳಿಂದ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಒಂದು ಶಾಲೆಯಿಂದ ಬಂಟ್ವಾಳ ಠಾಣಾ ವ್ಯಾಪ್ತಿಯ ಒಂದು ಶಾಲೆಯಿಂದ ಹಾಗೂ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಒಂದು ಶಾಲೆಯಲ್ಲಿ ಹೀಗೆ ಒಂಬತ್ತು ಶಾಲೆಗಳಲ್ಲಿ ಕಳ್ಳತನ ನಡೆಸಿದ್ದರು.

ಬೆಳ್ತಂಗಡಿ ವೃತ್ತನಿರೀಕ್ಷಕ ಶಿವಕುಮಾರ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಎಸ್.ಐ ಅನಿಲ್ ಕುಮಾರ್ ಹಾಗೂ ತಂಡ ಇದೀಗ ಆರೋಪಿಗಳನ್ನು ಬಂಧಿಸಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

See also  ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾರಥೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು