News Karnataka Kannada
Thursday, March 28 2024
Cricket
ಮಂಗಳೂರು

ಬೆಳ್ತಂಗಡಿ: ಸಾರ್ವಜನಿಕ ಪ್ರಚಾರ ಸಭೆಗೆ ಚಾಲನೆ ನೀಡಿದ ಹರೀಶ್ ಪೂಂಜ

Harish Poonja launches public rally
Photo Credit : News Kannada

ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ, ಶಾಸಕ ಹರೀಶ್ ಪೂಂಜ ಅವರು ಸಾರ್ವಜನಿಕ ಪ್ರಚಾರ ಸಭೆ ಆರಂಭಿಸಿದ್ದು, ಮೇ ೧ರಂದು ಪಡಂಗಡಿಯಲ್ಲಿ ನಡೆದ ಮೊದಲ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾದರು.

ಸಾರ್ವಜನಿಕ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಬೆಳ್ತಂಗಡಿ ಕ್ಷೇತ್ರ ಈಗ ರಾಜ್ಯಕ್ಕೆ ಮಾದರಿಯಾಗಿ ನಿಂತಿದೆ. ಅಭಿವೃದ್ಧಿಯ ಮಹಾಪರ್ವವೇ ನಡೆದಿದೆ. ಬೆಳ್ತಂಗಡಿಯಲ್ಲಿ ಮತ್ತಷ್ಟು ಅಭಿವೃದ್ಧಿ ವೇಗ ಹೆಚ್ಚಿಸಲು ಕ್ಷೇತ್ರದ ಜನತೆ ಮತ್ತೊಂದು ಬಾರಿ ಹರೀಶ್ ಪೂಂಜ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು, ಬಿಜೆಪಿ ಸರಕಾರದ ಸಾಧನೆಗಳನ್ನು ಜನತೆಯ ಮುಂದಿಟ್ಟು, ಕ್ಷೇತ್ರದ ಜನರ ಸೇವೆ ಮಾಡಲು ಮತ್ತೊಂದು ಅವಕಾಶ ನೀಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಮಾಜಿ ಮಂಡಲ ಅಧ್ಯಕ್ಷ ಕುಶಾಲಪ್ಪ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಳಿಕ ವೇಣೂರು, ನಾರಾವಿಯಲ್ಲಿ ನಡೆದ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು. ಬಿಜೆಪಿ ದಾಖಲೆಯ ಅಂತರದಲ್ಲಿ ಗೆಲ್ಲುವ ಮುನ್ಸೂಚನೆಯಾಗಿದೆ ಎಂದು ಹರೀಶ್ ಪೂಂಜ ಅಭಿಪ್ರಾಯ ಪಟ್ಟರು.

ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಪರ ಮೇ ೨ರಂದು ನೆರಿಯ, ಕೊಕ್ಕಡ, ಅರಸಿನಮಕ್ಕಿಯ ಹತ್ಯಡ್ಕದಲ್ಲಿ ಮತ ಪ್ರಚಾರ ಸಭೆ ನಡೆಸಲಾಯಿತು. ಸಾವಿರಾರು ಕಾರ್ಯಕರ್ತರು, ಸ್ಥಳೀಯರು ಭಾಗವಹಿಸಿ ಅಭಿಮಾನ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು